ನವದೆಹಲಿ: ರಂಜಾನ್ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮೇ 17ರಿಂದ ಘೋಷಿಸಲಾಗಿರುವ ಕದನ ವಿರಾಮವನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಜತೆಗೆ, ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ಮುಂದುವರಿಸುವುದಾಗಿ ತಿಳಿಸಿದೆ.
ರಂಜಾನ್ ತಿಂಗಳ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಗೆ ನೀಡಲಾಗಿದ್ದ ತಡೆಯನ್ನು ಇನ್ನು ಮುಂದುವರಿಸುವುದಿಲ್ಲ ಎಂದು ಗೃಹ ಇಲಾಖೆ ಟ್ವೀಟ್ ಮೂಲಕ ತಿಳಿಸಿದೆ.
The Government of India decides not to extend the suspension of operations in J&K announced in the beginning of Ramazan.