‘ಈ ತಂಡಗಳು ಸಾಲ ಮನ್ನಾಕ್ಕೆ ಆಗ್ರಹಿಸಿ ಮೈತ್ರಿ ಸರ್ಕಾರದ ವಿರುದ್ಧ ರೈತರನ್ನು ಹುರಿದುಂಬಿಸಬೇಕು. ಆಯಾ ಜಿಲ್ಲೆಯ ರೈತರ ಸಮಸ್ಯೆಗಳನ್ನು ಪಟ್ಟಿ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ನೀಡಿರುವ ಯೋಜನೆಗಳ ಮನವರಿಕೆ ಮಾಡಬೇಕು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸುವಂತೆ ರೈತರಿಗೆ ಮನವಿ ಮಾಡಬೇಕು’ ಎಂದು ಮುಖಂಡರೊಬ್ಬರು ತಿಳಿಸಿದರು.