ಉಜಿರೆ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 12 ದಿನಗಳ ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಾಗಿ ಧರ್ಮಸ್ಥಳ ಶಾಂತಿವನದಲ್ಲಿನ ಎಸ್ಡಿಎಂ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದು, ಭಾನುವಾರದಿಂದ ಯೋಗಾಭ್ಯಾಸ, ಮಸಾಜ್, ಉಗಿಸ್ನಾನ ಆರಂಭವಾಗಿದೆ.
ಸಿದ್ದರಾಮಯ್ಯ ಅವರು ಇದಕ್ಕೆ ಮೊದಲು ಇಲ್ಲಿ ಎರಡು ಬಾರಿ ಪ್ರಕೃತಿ ಚಿಕಿತ್ಸೆ ಮಾಡಿಸಿಕೊಂಡಿದ್ದರು.