ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋದಾಮಿಗೆ ಬೆಂಕಿ: ₹50 ಲಕ್ಷ ನಷ್ಟ

Last Updated 19 ಜೂನ್ 2018, 7:15 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಸವದತ್ತಿಯ ಎಪಿಎಂಸಿ ಪ್ರಾಂಗಣದಲ್ಲಿದ್ದ ಅಶೋಕ ಕಾಟನ್ ಟ್ರೇಡಿಂಗ್ ಗೋದಾಮುವಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು ₹ 50 ಲಕ್ಷ ಮೊತ್ತದ ಹತ್ತಿ, ಗೋವಿನ ಜೋಳ ಹಾಗೂ ಕಡಲೆ ಸುಟ್ಟು ಕರಕಲಾಗಿದೆ.

ಸೋಮವಾರ ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ವಾಯುವಿಹಾರಕ್ಕೆ ಹೋದವರು ನೋಡಿ, ಅಗ್ನಿಶಾಮಕ ದಳದ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ, ಬೆಂಕಿ ನಂದಿಸಿದರು.

ಬೆಂಕಿ ಹೊತ್ತಿಕೊಳ್ಳಲು ಏನು ಕಾರಣವೆನ್ನುವುದು ತಿಳಿದುಬಂದಿಲ್ಲ.

ಗೋದಾಮು ಅಶೋಕ ಚೋಪ್ರಾ ಎಂಬುವರಿಗೆ ಸೇರಿದೆ. 1,000 ಕ್ವಿಂಟಲ್ ಹತ್ತಿ, 400 ಕ್ವಿಂಟಲ್ ಗೋವಿನ ಜೋಳ ಹಾಗೂ 20 ಕ್ವಿಂಟಲ್ ಕಡಲೆ ಸುಟ್ಟು ಕರಲಾಗಿದೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT