ವಿಚಾರಣೆ ವೇಳೆ ಅರ್ಜಿದಾರ ಶಶಿಧರ ಶಾನುಭೋಗ ಅವರ ಪರ ವಕೀಲ ಗುರುಮಠ ಅವರು, 'ಈಗಾಗಲೇ ಈ ಹಿಂದಿನ ಕೇಂದ್ರ ಸರ್ಕಾರ ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ 2013ರ ನವೆಂಬರ್ 14ರಂದು ಬರೆದಿರುವ ಪತ್ರದಲ್ಲಿ, ಜನಗಣತಿಯಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಕಾಲಂ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಆದ್ದರಿಂದ ಮತ್ತೆ ಪರಿಶೀಲನೆಗೆ ಕಾಲಾವಕಾಶ ಕೋರಿಕೆ ಅನಗತ್ಯ' ಎಂದು ಪ್ರತಿ ಪಾದಿಸಿದರು.