ನಗರದ ಸೋಸಿಯೂತ್ಸ್ ಅಸೋಸಿಯೇಷನ್, ವಿವೇಕಾನಂದ ಪ್ರಾಥಮಿಕ ಶಾಲೆ ಆವರಣದಲ್ಲಿ ಅರಣ್ಯ ಇಲಾಖೆ ಹಾಗೂ ನಗರಸಭೆ ಸಹಯೋಗದೊಂದಿಗೆ ಆಯೋಜಿಸಿದ್ದ ‘ಹಸಿರು ಚೈತನ್ಯ-3’ ಸಸಿ ನೆಡುವ ಕಾರ್ಯಕ್ರಮಕ್ಕೆ ಸಸಿ ನೆಟ್ಟು ಚಾಲನೆ ನೀಡಿ ಮಾತನಾಡಿದರು. ‘ನಗರದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವುದು ಕೇವಲ ಸರ್ಕಾರದ ಕೆಲಸ ಅಲ್ಲ. ಸಾರ್ವಜನಿಕರು ಪ್ರತಿ ಭಾನುವಾರ ಈ ಕಾರ್ಯದಲ್ಲಿ ತೊಡಗಿಸಿಕೊಂಡರೆ ಉತ್ತಮ ಫಲ ದೊರೆಯಲು ಸಾಧ್ಯವಿದೆ. ಹಸಿರೀಕರಣದ ಮುಂದಾಳತ್ವ ವಹಿಸುವ ಸಂಘ ಸಂಸ್ಥೆಗಳಿಗೆ ಎಲ್ಲ ರೀತಿಯ ನೆರವು ನೀಡುವಂತೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದು, ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಮುಂದೆ ಬರಬೇಕು' ಎಂದು ಕರೆ ನೀಡಿದರು.