ರಾಜ್ಯ ರೈತಸಂಘ–ಹಸಿರು ಸೇನೆ ಜಿಲ್ಲಾ ಘಟಕದ ಮುಖಂಡ ಕೆ.ಕೆ.ಕೃಷ್ಣಗೌಡ ಮಾತನಾಡಿ, ‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೇ 30 ರಂದು ರೈತರ ಸಭೆ ನಡೆಸಿ ಸಾಲಮನ್ನಾ ಕುರಿತು ಚರ್ಚಿಸಿದ್ದರು. 15 ದಿನಗಳೊಳಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ರೈತರ ಸಾಲಮನ್ನಾ ಘೋಷಣೆಗೆ ವಿಳಂಬನೀತಿ ಅನುಸರಿಸುತ್ತಿದ್ದಾರೆ’ ಎಂದು ದೂಷಿಸಿದರು.