<p><strong>ಮಂಡ್ಯ: </strong>‘ಮುಂಬೈನ ದಾದರ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಗೃಹದ ಮೇಲೆ ದಾಳಿ ನಡೆಸಿರುವವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್ಸ್, ದ್ರಾವಿಡ ಚಳವಳಿ ಮುಖಂಡ ಅಭಿಗೌಡ ಹನಕೆರೆ ಆಗ್ರಹಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಮಾಜದಲ್ಲಿ ಜಾತೀಯತೆ, ತಾರತಮ್ಯ ಮೂಡಿಸುವ ಮನಸ್ಥಿತಿಗಳೇ ದಾಳಿಯ ಹಿಂದಿವೆ. ಟಿ.ವಿ ಮಾಧ್ಯಮ, ಪಠ್ಯಪುಸ್ತಕದ ಮೂಲಕ ಇಂದಿಗೂ ಅಸಮಾನತೆ ಹಾಗೂ ತಾರತಮ್ಯ ಬಿತ್ತುತ್ತಿರುವ ಫಲವೇ ಈ ದಾಳಿಯಾಗಿದೆ. ಅಂಬೇಡ್ಕರ್ ಅವರು ಯಾವುದೇ ಭಾಷೆ, ಜಾತಿಗೆ ಪ್ರಾಂತ್ಯಕ್ಕೆ ಸೀಮಿತವಲ್ಲ. ಅವರು ವಿಶ್ವಮಾನವರಾಗಿದ್ದು, ಬಡವರು, ದೀನ ದಲಿತರು, ಅಸಂಘಟಿತ ವಲಯದ ಕಾರ್ಮಿಕರ ಹಲವು ಸಮಸ್ಯೆಗಳಿಗೆ ಪರಿಹಾರವಾಗಿದ್ದಾರೆ’ ಎಂದು ಹೇಳಿದರು.</p>.<p>ಗಂಗರಾಜು ಹನಕೆರೆ ಮಾತನಾಡಿ ‘ಇಲ್ಲಿಯವರೆಗೂ ದಾಳಿಯ ವಿರುದ್ಧವಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ವೆನಿಸುತ್ತದೆ. ಅಲ್ಲದೆ ಇದನ್ನು ಖಂಡಿಸಿ ಪ್ರತಿಭಟಿಸುವುದನ್ನೂ ತಡೆಯಲು ರಾಜಗೃಹದ ಬಳಿ ನಿಷೇಧಾಜ್ಞೆ ಜಾರಿಗೊಳಿಸಿ ದಾಳಿಯನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಮುಖಂಡರಾದ ಕಿರಣ್ಕುಮಾರ್, ಸಿ.ಗುರಪ್ಪ, ಗಣಂಗೂರು ವೆಂಕಟೇಶ್, ಶಿವರುದ್ರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>‘ಮುಂಬೈನ ದಾದರ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಗೃಹದ ಮೇಲೆ ದಾಳಿ ನಡೆಸಿರುವವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್ಸ್, ದ್ರಾವಿಡ ಚಳವಳಿ ಮುಖಂಡ ಅಭಿಗೌಡ ಹನಕೆರೆ ಆಗ್ರಹಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಮಾಜದಲ್ಲಿ ಜಾತೀಯತೆ, ತಾರತಮ್ಯ ಮೂಡಿಸುವ ಮನಸ್ಥಿತಿಗಳೇ ದಾಳಿಯ ಹಿಂದಿವೆ. ಟಿ.ವಿ ಮಾಧ್ಯಮ, ಪಠ್ಯಪುಸ್ತಕದ ಮೂಲಕ ಇಂದಿಗೂ ಅಸಮಾನತೆ ಹಾಗೂ ತಾರತಮ್ಯ ಬಿತ್ತುತ್ತಿರುವ ಫಲವೇ ಈ ದಾಳಿಯಾಗಿದೆ. ಅಂಬೇಡ್ಕರ್ ಅವರು ಯಾವುದೇ ಭಾಷೆ, ಜಾತಿಗೆ ಪ್ರಾಂತ್ಯಕ್ಕೆ ಸೀಮಿತವಲ್ಲ. ಅವರು ವಿಶ್ವಮಾನವರಾಗಿದ್ದು, ಬಡವರು, ದೀನ ದಲಿತರು, ಅಸಂಘಟಿತ ವಲಯದ ಕಾರ್ಮಿಕರ ಹಲವು ಸಮಸ್ಯೆಗಳಿಗೆ ಪರಿಹಾರವಾಗಿದ್ದಾರೆ’ ಎಂದು ಹೇಳಿದರು.</p>.<p>ಗಂಗರಾಜು ಹನಕೆರೆ ಮಾತನಾಡಿ ‘ಇಲ್ಲಿಯವರೆಗೂ ದಾಳಿಯ ವಿರುದ್ಧವಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ವೆನಿಸುತ್ತದೆ. ಅಲ್ಲದೆ ಇದನ್ನು ಖಂಡಿಸಿ ಪ್ರತಿಭಟಿಸುವುದನ್ನೂ ತಡೆಯಲು ರಾಜಗೃಹದ ಬಳಿ ನಿಷೇಧಾಜ್ಞೆ ಜಾರಿಗೊಳಿಸಿ ದಾಳಿಯನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಮುಖಂಡರಾದ ಕಿರಣ್ಕುಮಾರ್, ಸಿ.ಗುರಪ್ಪ, ಗಣಂಗೂರು ವೆಂಕಟೇಶ್, ಶಿವರುದ್ರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>