<p><strong>ಚೆನ್ನೈ:</strong> ಮದ್ಯದಂಗಡಿ ತೆರೆಯುವ ವಿಚಾರವಾಗಿ ನಟ ರಜನಿಕಾಂತ್ ಅವರು ತಮಿಳುನಾಡು ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.</p>.<p>ಈ ಸಂದರ್ಭ ತಮಿಳುನಾಡಿನಲ್ಲಿ ಮತ್ತೆ ಮದ್ಯದಂಗಡಿ ತೆರೆಯಲು ಮುಂದಾದರೆ, ಮರಳಿ ಅಧಿಕಾರಕ್ಕೆ ಬರುವ ಕನಸನ್ನು ಕಾಣುವುದು ಬಿಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ರಜನಿಕಾಂತ್ ಎಚ್ಚರಿಕೆ ನೀಡಿದ್ದಾರೆ. </p>.<p>ಈ ಬಗ್ಗೆ ಭಾನುವಾರ ಬೆಳಗ್ಗೆ ತಮಿಳಿನಲ್ಲಿ ಟ್ವೀಟ್ ಮಾಡಿರುವ ಅವರು, 'ಈ ಸಂದರ್ಭದಲ್ಲಿ ಮತ್ತೆ ಮದ್ಯದಂಗಡಿ ತೆರೆಯಲು ಮಂದಾದರೆ, ಎಐಎಡಿಎಂಕೆ ಸರ್ಕಾರ ಮರಳಿ ಅಧಿಕಾರಕ್ಕೆ ಬರುವ ಕನಸು ಕಾಣಲು ಸಾಧ್ಯವಿಲ್ಲ. ಬೊಕ್ಕಸ ತುಂಬಿಸಿಕೊಳ್ಳಲು ದಯಮಾಡಿ ಬೇರೆ ಮಾರ್ಗ ಹುಡುಕಿರಿ' ಎಂದು ಹೇಳಿದ್ದಾರೆ.<br /><br />ಲಾಕ್ಡೌನ್ ಇರುವ ವರೆಗೆ ರಾಜ್ಯದಲ್ಲಿ ಎಲ್ಲ ಮದ್ಯದಂಗಡಿಗಳನ್ನು ಮುಚ್ಚಬೇಕು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು</p>.<p>‘ಮದ್ರಾಸ್ ಹೈಕೋರ್ಟ್ ನಿನ್ನೆ ನೀಡಿರುವ ಆದೇಶ ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದೇವೆ’ ಎಂದು ಸರ್ಕಾರದ ಪರ ವಕೀಲರೊಬ್ಬರು ಶನಿವಾರ ತಿಳಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಮದ್ಯದಂಗಡಿ ತೆರೆಯುವ ವಿಚಾರವಾಗಿ ನಟ ರಜನಿಕಾಂತ್ ಅವರು ತಮಿಳುನಾಡು ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.</p>.<p>ಈ ಸಂದರ್ಭ ತಮಿಳುನಾಡಿನಲ್ಲಿ ಮತ್ತೆ ಮದ್ಯದಂಗಡಿ ತೆರೆಯಲು ಮುಂದಾದರೆ, ಮರಳಿ ಅಧಿಕಾರಕ್ಕೆ ಬರುವ ಕನಸನ್ನು ಕಾಣುವುದು ಬಿಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ರಜನಿಕಾಂತ್ ಎಚ್ಚರಿಕೆ ನೀಡಿದ್ದಾರೆ. </p>.<p>ಈ ಬಗ್ಗೆ ಭಾನುವಾರ ಬೆಳಗ್ಗೆ ತಮಿಳಿನಲ್ಲಿ ಟ್ವೀಟ್ ಮಾಡಿರುವ ಅವರು, 'ಈ ಸಂದರ್ಭದಲ್ಲಿ ಮತ್ತೆ ಮದ್ಯದಂಗಡಿ ತೆರೆಯಲು ಮಂದಾದರೆ, ಎಐಎಡಿಎಂಕೆ ಸರ್ಕಾರ ಮರಳಿ ಅಧಿಕಾರಕ್ಕೆ ಬರುವ ಕನಸು ಕಾಣಲು ಸಾಧ್ಯವಿಲ್ಲ. ಬೊಕ್ಕಸ ತುಂಬಿಸಿಕೊಳ್ಳಲು ದಯಮಾಡಿ ಬೇರೆ ಮಾರ್ಗ ಹುಡುಕಿರಿ' ಎಂದು ಹೇಳಿದ್ದಾರೆ.<br /><br />ಲಾಕ್ಡೌನ್ ಇರುವ ವರೆಗೆ ರಾಜ್ಯದಲ್ಲಿ ಎಲ್ಲ ಮದ್ಯದಂಗಡಿಗಳನ್ನು ಮುಚ್ಚಬೇಕು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು</p>.<p>‘ಮದ್ರಾಸ್ ಹೈಕೋರ್ಟ್ ನಿನ್ನೆ ನೀಡಿರುವ ಆದೇಶ ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದೇವೆ’ ಎಂದು ಸರ್ಕಾರದ ಪರ ವಕೀಲರೊಬ್ಬರು ಶನಿವಾರ ತಿಳಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>