ಬೆಂಗಳೂರು: ಗುರುವಾರದಿಂದ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿರುವ ವಿದ್ಯಾರ್ಥಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಒತ್ತಡಕ್ಕೆ ಒಳಗಾಗಬೇಡಿ, ಇದು ಕೊಠಡಿಯ ಪರೀಕ್ಷೆ, ಜೀವನದ ಪರೀಕ್ಷೆ ಅಲ್ಲ. ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ ಯಶಸ್ಸು ನಿಮ್ಮದಾಗಲಿ, ಗುಡ್ ಲಕ್ ಎಂದಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭಾಶಯಗಳು.
ಒತ್ತಡಕ್ಕೆ ಒಳಗಾಗಬೇಡಿ. ನೆನಪಿರಲಿ ಇದು ಶಾಲೆಯ ಪರೀಕ್ಷೆ, ಜೀವನದ ಪರೀಕ್ಷೆ ಅಲ್ಲ.
ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿ. Good luck 👍 1/2