ಬಿಜೆಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮತ್ತು ಯೂಟ್ಯೂಬರ್ ಧ್ರುವ್ ರಾಠಿ ನಡುವೆ ನಡೆದಿದೆ ಎನ್ನಲಾದ ಫೋನ್ ಕರೆ ಸಂಭಾಷಣೆಯ ಧ್ವನಿಮುದ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ಮುದ್ರಿಕೆಯಲ್ಲಿ ಸ್ವಾತಿ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ತಮ್ಮ ಮೇಲೆ ನಡೆದ ಹಲ್ಲೆಯ ಬಗ್ಗೆ ವಿವರಿಸಿದ್ದಾರೆ. ಮತ್ತು ಧ್ರುವ್ ರಾಠಿ ಅವರಿಗೆ ಕಾಲಕಾಲಕ್ಕೆ ‘ಪೇಮೆಂಟ್’ ಬರುತ್ತಿದೆಯೇ ಎಂಬುದರ ಬಗ್ಗೆ ಇಬ್ಬರೂ ಮಾತನಾಡಿದ್ದಾರೆ. ಧ್ರುವ್ ರಾಠಿ ಅವರು ಹಣ ಪಡೆದುಕೊಂಡು ಯುಟ್ಯೂಬ್ನಲ್ಲಿ ವಿಡಿಯೊಗಳನ್ನು ಹರಿಬಿಡುತ್ತಿದ್ದಾರೆ ಎಂಬ ಸಂದೇಶದೊಂದಿಗೆ ಈ ಧ್ವನಿಮುದ್ರಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ಸುಳ್ಳು ಸುದ್ದಿ.