<p>ಮಹಿಳೆಯನ್ನು ಗುಂಪೊಂದು ಥಳಿಸುತ್ತಿರುವ ವಿಡಿಯೊವನ್ನು ‘ಬಿಜೆಪಿ ಉತ್ತರ ಪ್ರದೇಶ’ ಟ್ವಿಟರ್ ಖಾತೆಯಲ್ಲಿ ಇದೇ 18ರಂದು ಟ್ವೀಟ್ ಮಾಡಲಾಗಿತ್ತು. ಇದು, ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನದಲ್ಲಿ ನಡೆದಿದೆ ಎಂದು ಹೇಳಲಾಗಿತ್ತು. ಈ ಘಟನೆಯ ಕುರಿತು ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಇಬ್ಬರಿಂದಲೂ ಪ್ರತಿಕ್ರಿಯೆ ಕೇಳಲಾಗಿತ್ತು. ಈ ಟ್ವೀಟ್ ಅನ್ನು ಬಿಜೆಪಿಯ ಜಮಶೆಡ್ಪುರ್ ಮಹಾನಗರ, ಆಗ್ರ ಮಹಾನಗರ ಟ್ವಿಟರ್ ಖಾತೆಗಳೂ ಸೇರಿ ಹಲವಾರು ಟ್ವಿಟರ್ ಖಾತೆಗಳು ಹಂಚಿಕೊಂಡಿದ್ದವು.</p>.<p>ಇದು ರಾಜಸ್ಥಾನದ ಘಟನೆಯಲ್ಲ ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ. ಉತ್ತರ ಪ್ರದೇಶದ ಅಮೇಠಿಯ ಭಾಗ್ವ ಗ್ರಾಮದಲ್ಲಿ ಈ ಘಟನೆ ನಡೆದಿರುವ ಕುರಿತು ದೈನಿಕ್ ಜಾಗರಣ್ ದಿನ ಪತ್ರಿಕೆಯ ಪತ್ರಕರ್ತರೊಬ್ಬರು 18ರಂದೇ ಟ್ವೀಟ್ ಮಾಡಿದ್ದಾರೆ. ಈ ಪ್ರಕರಣ ಇದೇ 15ರಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರಿಗಂಜ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ಪೊಲೀಸರು ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಭೂ ಕಲಹದ ಕಾರಣ ತಾಯಿ, ಮಗಳನ್ನು ಥಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಿಳೆಯನ್ನು ಗುಂಪೊಂದು ಥಳಿಸುತ್ತಿರುವ ವಿಡಿಯೊವನ್ನು ‘ಬಿಜೆಪಿ ಉತ್ತರ ಪ್ರದೇಶ’ ಟ್ವಿಟರ್ ಖಾತೆಯಲ್ಲಿ ಇದೇ 18ರಂದು ಟ್ವೀಟ್ ಮಾಡಲಾಗಿತ್ತು. ಇದು, ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನದಲ್ಲಿ ನಡೆದಿದೆ ಎಂದು ಹೇಳಲಾಗಿತ್ತು. ಈ ಘಟನೆಯ ಕುರಿತು ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಇಬ್ಬರಿಂದಲೂ ಪ್ರತಿಕ್ರಿಯೆ ಕೇಳಲಾಗಿತ್ತು. ಈ ಟ್ವೀಟ್ ಅನ್ನು ಬಿಜೆಪಿಯ ಜಮಶೆಡ್ಪುರ್ ಮಹಾನಗರ, ಆಗ್ರ ಮಹಾನಗರ ಟ್ವಿಟರ್ ಖಾತೆಗಳೂ ಸೇರಿ ಹಲವಾರು ಟ್ವಿಟರ್ ಖಾತೆಗಳು ಹಂಚಿಕೊಂಡಿದ್ದವು.</p>.<p>ಇದು ರಾಜಸ್ಥಾನದ ಘಟನೆಯಲ್ಲ ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ. ಉತ್ತರ ಪ್ರದೇಶದ ಅಮೇಠಿಯ ಭಾಗ್ವ ಗ್ರಾಮದಲ್ಲಿ ಈ ಘಟನೆ ನಡೆದಿರುವ ಕುರಿತು ದೈನಿಕ್ ಜಾಗರಣ್ ದಿನ ಪತ್ರಿಕೆಯ ಪತ್ರಕರ್ತರೊಬ್ಬರು 18ರಂದೇ ಟ್ವೀಟ್ ಮಾಡಿದ್ದಾರೆ. ಈ ಪ್ರಕರಣ ಇದೇ 15ರಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರಿಗಂಜ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ಪೊಲೀಸರು ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಭೂ ಕಲಹದ ಕಾರಣ ತಾಯಿ, ಮಗಳನ್ನು ಥಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>