‘ಆಪರೇಷನ್ ಸಿಂಧೂರ‘ ವಿಫಲವಾಗಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ. ಪಾಕಿಸ್ತಾನದ ಕ್ಷಿಪಣಿಗಳು ಭಾರತದ ಹಲವು ಸ್ಥಳಗಳಿಗೆ ಅಪ್ಪಳಿಸಿದ್ದವು. ಅವುಗಳನ್ನು ತಡೆಯಲು ಸಾಧ್ಯವಾಗಿರಲಿಲ್ಲ. ಈ ಕಾರ್ಯಾಚರಣೆ ವಿಫಲವಾಗಿದ್ದಕ್ಕೆ ಮೋದಿ ಅವರು ರಾಜೀನಾಮೆ ನೀಡಬೇಕು’ ಎಂದು ಗೃಹಸಚಿವ ಅಮಿತ್ ಶಾ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ ಎನ್ನಲಾದ ವಿಡಿಯೊ ತುಣುಕನ್ನು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. 1.30 ನಿಮಿಷದ ಈ ತುಣುಕನ್ನು ‘ದಿ ವಿಷಲ್ ಬ್ಲೋವರ್’ ಎಂಬ ‘ಎಕ್ಸ್’ ಖಾತೆಯಲ್ಲಿ ಮೊದಲಿಗೆ ಪೋಸ್ಟ್ ಮಾಡಲಾಗಿತ್ತು. ಆದರೆ, ಇದು ಸುಳ್ಳು ಸುದ್ದಿ.