ಇದು ಸುಳ್ಳು ಸುದ್ದಿ ಎಂದು ಪಿಐಬಿ ಫ್ಯಾಕ್ಟ್ಚೆಕ್ ಪ್ರಕಟಿಸಿದೆ. ‘ಪ್ರಧಾನಮಂತ್ರಿ ಕುಸುಮ್ ಯೋಜನೆ ಅಡಿ ರೈತರು ತಮ್ಮ ಹೊಲಗಳಲ್ಲಿ ಸೌರ ಪಂಪ್ ಅಳವಡಿಸಿಕೊಳ್ಳಲು ಸರ್ಕಾರಕ್ಕೆ ₹5,600 ಶುಲ್ಕ ಪಾವತಿ ಮಾಡಬೇಕಿಲ್ಲ. ಈ ಸಂದೇಶ ಮತ್ತು ಪೋಸ್ಟರ್ಗಳಲ್ಲಿ ಹಂಚಿಕೊಳ್ಳಲಾಗಿರುವ ಆದೇಶ ಪತ್ರವು ನಕಲಿ. ನವೀಕರಿಸಬಹುದಾದ ಇಂಧನ ಸಚಿವಾಲಯವು ಇಂತಹ ಯಾವುದೇ ಆದೇಶ ಪತ್ರವನ್ನು ಹೊರಡಿಸಿಲ್ಲ. ಈ ಆದೇಶ ಪತ್ರದಲ್ಲಿ ಸೂಚಿಸಿರುವಂತೆ ಯಾವುದೇ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಬೇಡಿ. ಇದೊಂದು ಮೋಸದ ಜಾಲ. ಈ ಪತ್ರವನ್ನು ತೋರಿಸಿ ಯಾರಾದರೂ ಹಣ ಕೇಳಿದರೆ, ತಕ್ಷಣವೇ ಪೊಲೀಸರಿಗೆ ದೂರು ನೀಡಿ. ಈಗಾಗಲೇ ಹಣ ಪಾವತಿ ಮಾಡಿರುವವರು ಸಹ, ಪತ್ರದಲ್ಲಿ ನಮೂದಿಸಿರುವ ಬ್ಯಾಂಕ್ ಖಾತೆದಾರರ ವಿರುದ್ಧ ದೂರು ದಾಖಲಿಸಿ, ಕ್ರಮ ತೆಗೆದುಕೊಳ್ಳಿ’ ಎಂದು ಪಿಐಬಿ ಹೇಳಿದೆ.