ಈಚೆಗೆ ಸಂಭವಿಸಿದ ಬಾಲೇಶ್ವರ ರೈಲು ದುರಂತದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿರುವ ಸ್ಟೇಷನ್ ಮಾಸ್ಟರ್ ಒಬ್ಬರ ಕೈವಾಡವಿದೆ ಎಂಬ ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವ್ಯಕ್ತಿಯೊಬ್ಬರ ಚಿತ್ರದೊಂದಿಗೆ ಈ ಕುರಿತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ‘ದುರಂತ ನಡೆದ ಸ್ಥಳಕ್ಕೆ ಸಮೀಪದಲ್ಲಿರುವ ಬಹನಾಗಾ ಬಜಾರ್ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ಷರೀಫ್ ಆಲಿ ಎಂಬುವವರು ಅಪಘಾತದ ತನಿಖೆ ಆರಂಭವಾದ ಬಳಿಕ ತಲೆಮರೆಸಿಕೊಂಡಿದ್ದಾರೆ. ಇನ್ನು ಮುಂದೆ ಉದ್ಯೋಗ ನೇಮಕಾತಿ ಮಾಡುವ ವೇಳೆ ಹೆಸರನ್ನೂ ಕಡ್ಡಾಯವಾಗಿ ಪರೀಕ್ಷಿಸಬೇಕು’ ಎಂದು ಅಡಿಬರಹ ಬರೆಯಲಾಗಿದೆ. ಆದರೆ, ಇದು ಸುಳ್ಳು ಸುದ್ದಿ.