‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಭಾರತ ನ್ಯಾಯಯಾತ್ರೆಯನ್ನು ಭಾರತ ಆಕ್ರಮಿತ ಅರುಣಾಚಲ ಪ್ರದೇಶದಿಂದ ಆರಂಭಿಸದೆ ಮಣಿಪುರದಿಂದ ಆರಂಭಿಸಿದ್ದಾರೆ. ಚೀನಾದ ಸಾರ್ವಭೌಮತ್ವವನ್ನು ಗೌರವಿಸಿದ್ದಕ್ಕಾಗಿ ರಾಹುಲ್ ಅವರಿಗೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಅವರು ಧನ್ಯವಾದ ಅರ್ಪಿಸಿದ್ದಾರೆ’ ಎಂದು ಗ್ಲೋಬಲ್ ಟೈಮ್ಸ್ ಸುದ್ದಿ ಸಂಸ್ಥೆಯು ತನ್ನ ಜಾಲತಾಣದಲ್ಲಿ ಹಂಚಿಕೊಂಡಿರುವ ಸ್ಕ್ರೀನ್ಶಾಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ‘ನ್ಯಾಯಯಾತ್ರೆಯ ಮಾರ್ಗವನ್ನು ಸಾರ್ವಜನಿಕಗೊಳಿಸಿದ ದಿನವೇ ನಾನು ಹೇಳಿದ್ದೆ. ಅರುಣಾಚಲ ಪ್ರದೇಶವನ್ನು ಕೈಬಿಡಲಾಗಿದೆ ಎಂದು. ಕಾಂಗ್ರೆಸ್ ಅಂದರೆ, ಚೀನಾದ ಫ್ರಾಂಚೈಸಿ’ ಎಂದು ಹಲವರು ತನ್ನ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಇದು ಸುಳ್ಳು ಸುದ್ದಿ.