ದೇಶದ ಉದ್ದಗಲಕ್ಕೂ ಕೊರೊನಾ ಸೋಂಕಿನ ಎರಡನೇ ಅಲೆ ಅಪ್ಪಳಿಸಿ ಜನರಲ್ಲಿ ಭೀತಿ ಮೂಡಿಸಿದೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಆಮ್ಲಜನಕ ಸಿಗದೆ ರೋಗಿಗಳು ಒದ್ದಾಡುತ್ತಿದ್ದಾರೆ. ಸೋಂಕು ಬರುವುದಕ್ಕಿಂತ ಮುನ್ನ ಅದನ್ನು ತಡೆಯುವುದು ಅತಿಮುಖ್ಯ. ಹೇಗೆಲ್ಲಾ ಸೋಂಕು ತಡೆಬಹುದು ಎಂಬ ಕುರಿತ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಿಸಿನೀರಿನಲ್ಲಿ ನಿಂಬೆಯ ಹೋಳುಗಳು ಹಾಗೂ ಬೇಕಿಂಗ್ ಸೋಡಾ ಸೇರಿಸಿ ಕುಡಿಯುವುದರಿಂದ ವೈರಾಣು ಸಾಯುತ್ತದೆ ಎಂಬ ಸಂದೇಶವೊಂದು ಎಲ್ಲೆಡೆ ಹರಿದಾಡತ್ತಿದೆ.