‘ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಮೊಹಮ್ಮದ್ ಅಲಿ ಜಿನ್ನಾ ಅವರು, ಆಗ ಖ್ಯಾತ ವಕೀಲರಾಗಿದ್ದರು. ಆದರೆ, ಸ್ವಾತಂತ್ರ್ಯ ಹೋರಾಟಗಾರ ಭಗತ್ಸಿಂಗ್ ಅವರ ಪರವಾಗಿ ಯಾರೂ ವಕಾಲತ್ತು ವಹಿಸಿಕೊಳ್ಳಲಿಲ್ಲ. ಹೀಗಾಗಿ ಅವರನ್ನು ಗಲ್ಲು ಶಿಕ್ಷೆಯಿಂದ ಪಾರು ಮಾಡಲು ಆಗಲಿಲ್ಲ’ ಎಂಬುದಾಗಿ ರಿಷಿ ಬಾಗ್ರೆ ಎಂಬುವರು ಟ್ವೀಟ್ ಮಾಡಿದ್ದಾರೆ. ಇದನ್ನು ಹಲವು ಟ್ವಿಟರ್ ಖಾತೆಗಳು ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.