<p>‘ಹಜ್ ಭವನ ನವೀಕರಣಕ್ಕೆ ಸಿಎಂ 5 ಸಾವಿರ ಕೋಟಿ ಅನುದಾನ ನೀಡಿದ್ದಾರೆ’ ಎಂಬ ಹೇಳಿಕೆಯನ್ನು ಕನ್ನಡದ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿದೆ. ಆ ಪ್ರಸಾರದ ಸ್ಕ್ರೀನ್ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗಿವೆ. ‘ನೂತನ ಸಂಸತ್ ಭವನಕ್ಕೆ ಮೋದಿ ಖರ್ಚು ಮಾಡಿದ್ದು ₹885 ಕೋಟಿ, ಅಯೋಧ್ಯೆ ರಾಮಮಂದಿರ ನಿರ್ಮಾಣದ ಅಂದಾಜು ವೆಚ್ಚ ₹3,000 ಕೋಟಿ. ಆದರೆ, ಹಜ್ ಭವನವನ್ನು ಕೇವಲ ನವೀಕರಿಸುವುದಕ್ಕೇ ಸಿ.ಎಂ ₹5,000 ಕೋಟಿ ನೀಡಿದ್ದಾರೆ’ ಎಂಬ ವಿವರಣೆಯನ್ನು ಈ ಸ್ಕ್ರೀನ್ಶಾಟ್ ಜೊತೆ ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ಸುಳ್ಳುಸುದ್ದಿ.</p>.<p>ಈ ಪ್ರಸಾರ ಕುರಿತಾದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ‘ಪ್ರಜಾವಾಣಿ’ಯು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜಡ್. ಜಮೀರ್ ಅಹಮದ್ ಖಾನ್ ಅವರನ್ನು ಸಂಪರ್ಕಿಸಿತ್ತು. ಅವರು ಇದು ಸುಳ್ಳು ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ₹5,000 ಕೋಟಿ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ನೀಡಲಾಗುವ ಅನುದಾನದಲ್ಲಿ ಕಡಿತವಾಗಬಹುದು ಎಂಬ ಆತಂಕ ನಮ್ಮ ಧಾರ್ಮಿಕ ಮುಖಂಡರಲ್ಲಿದೆ. ಇದನ್ನು ಮುಖ್ಯಮಂತ್ರಿಗಳ ಎದುರು ಪ್ರಸ್ತಾಪಿಸಿದ್ದೆ. ಹಜ್ ಭವನ ನವೀಕರಣಕ್ಕೆ ಸರ್ಕಾರವು ₹5 ಕೋಟಿ ನೀಡಿದೆ. ಈ ಬಗ್ಗೆ ನಾನು ನೀಡಿದ ಹೇಳಿಕೆಯನ್ನು ತಿರುಚಿ, ಹಜ್ ಭವನ ನವೀಕರಣಕ್ಕೆ ಸಿ.ಎಂ ₹5,000 ಕೋಟಿ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಸೃಷ್ಟಿಸಲಾಗಿದೆ. ಇದರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಹಜ್ ಭವನ ನವೀಕರಣಕ್ಕೆ ಸಿಎಂ 5 ಸಾವಿರ ಕೋಟಿ ಅನುದಾನ ನೀಡಿದ್ದಾರೆ’ ಎಂಬ ಹೇಳಿಕೆಯನ್ನು ಕನ್ನಡದ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿದೆ. ಆ ಪ್ರಸಾರದ ಸ್ಕ್ರೀನ್ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗಿವೆ. ‘ನೂತನ ಸಂಸತ್ ಭವನಕ್ಕೆ ಮೋದಿ ಖರ್ಚು ಮಾಡಿದ್ದು ₹885 ಕೋಟಿ, ಅಯೋಧ್ಯೆ ರಾಮಮಂದಿರ ನಿರ್ಮಾಣದ ಅಂದಾಜು ವೆಚ್ಚ ₹3,000 ಕೋಟಿ. ಆದರೆ, ಹಜ್ ಭವನವನ್ನು ಕೇವಲ ನವೀಕರಿಸುವುದಕ್ಕೇ ಸಿ.ಎಂ ₹5,000 ಕೋಟಿ ನೀಡಿದ್ದಾರೆ’ ಎಂಬ ವಿವರಣೆಯನ್ನು ಈ ಸ್ಕ್ರೀನ್ಶಾಟ್ ಜೊತೆ ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ಸುಳ್ಳುಸುದ್ದಿ.</p>.<p>ಈ ಪ್ರಸಾರ ಕುರಿತಾದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ‘ಪ್ರಜಾವಾಣಿ’ಯು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜಡ್. ಜಮೀರ್ ಅಹಮದ್ ಖಾನ್ ಅವರನ್ನು ಸಂಪರ್ಕಿಸಿತ್ತು. ಅವರು ಇದು ಸುಳ್ಳು ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ₹5,000 ಕೋಟಿ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ನೀಡಲಾಗುವ ಅನುದಾನದಲ್ಲಿ ಕಡಿತವಾಗಬಹುದು ಎಂಬ ಆತಂಕ ನಮ್ಮ ಧಾರ್ಮಿಕ ಮುಖಂಡರಲ್ಲಿದೆ. ಇದನ್ನು ಮುಖ್ಯಮಂತ್ರಿಗಳ ಎದುರು ಪ್ರಸ್ತಾಪಿಸಿದ್ದೆ. ಹಜ್ ಭವನ ನವೀಕರಣಕ್ಕೆ ಸರ್ಕಾರವು ₹5 ಕೋಟಿ ನೀಡಿದೆ. ಈ ಬಗ್ಗೆ ನಾನು ನೀಡಿದ ಹೇಳಿಕೆಯನ್ನು ತಿರುಚಿ, ಹಜ್ ಭವನ ನವೀಕರಣಕ್ಕೆ ಸಿ.ಎಂ ₹5,000 ಕೋಟಿ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಸೃಷ್ಟಿಸಲಾಗಿದೆ. ಇದರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>