ಸರಕು ಸಾಗಣೆ ರೈಲಿನಲ್ಲಿ ಜೆಸಿಬಿಗಳನ್ನು ಸಾಲಾಗಿ ಇರಿಸಿದ ಹಲವು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಜೆಸಿಬಿಗಳು ಉತ್ತರ ಪ್ರದೇಶದಿಂದ ರಾಜಸ್ಥಾನಕ್ಕೆ ಹೊರಟಿವೆ. ಉತ್ತರ ಪ್ರದೇಶದಂತೆ ರಾಜಸ್ಥಾನದಲ್ಲೂ ಬುಲ್ಡೋಜರ್ ಕಾರ್ಯಾಚರಣೆ ನಡೆಯಲಿದೆ ಎಂದು ಈ ಫೋಟೊಗಳೊಂದಿಗೆ ವಿವರಣೆ ಹಂಚಿಕೊಳ್ಳಲಾಗಿದೆ. ‘ಉತ್ತರ ಪ್ರದೇಶದಿಂದ ರೈಲೊಂದು ಜೆಸಿಬಿಗಳನ್ನು ತುಂಬಿಕೊಂಡು ರಾಜಸ್ಥಾನಕ್ಕೆ ಹೊರಟಿದೆ. ಇದು ಬಿಜೆಪಿ ಸರ್ಕಾರದ ಶಕ್ತಿ. ಜೈ ಶ್ರೀರಾಮ್, ಭಾರತ್ ಮಾತಾಕಿ ಜೈ’ ಎನ್ನುವಂಥ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗಷ್ಟೇ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಬಿಜೆಪಿಯು 115 ಸ್ಥಾನಗಳನ್ನು ಪಡೆದು ಅಧಿಕಾರ ಪಡೆದುಕೊಂಡಿದೆ. ಈ ಕಾರಣಕ್ಕಾಗಿ ಈ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಆದರೆ, ಇದು ಸುಳ್ಳು ಸುದ್ದಿ.