‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತಹಾಕದಿದ್ದರೆ ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗುತ್ತದೆ. ಈ ಬಗ್ಗೆ ಸರ್ಕಾರವು ಎಚ್ಚರಿಕೆ ನೀಡಿದೆ. ನಿಮ್ಮಲ್ಲಿ ಬ್ಯಾಂಕ್ ಖಾತೆ ಇಲ್ಲದಿದ್ದರೆ, ನೀವು ನಿಮ್ಮ ಮೊಬೈಲ್ಗೆ ರೀಚಾರ್ಜ್ ಮಾಡಿದಾಗ ಆ ಹಣ ಕಡಿತವಾಗುತ್ತದೆ. ಬ್ಯಾಂಕ್ ಖಾತೆ, ಮತದಾರರ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ ಎಲ್ಲವನ್ನೂ ಪರಸ್ಪರ ಜೋಡಿಸಿರುವುದರಿಂದ ಇದು ಸಾಧ್ಯವಾಗುತ್ತದೆ. ಹೀಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಿ’ ಎಂಬ ವಿವರ ಇರುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೆಲವು ಸುದ್ದಿತಾಣಗಳು ಈ ಸಂಬಂಧ ಪ್ರಕಟಿಸಿರುವ ಸುದ್ದಿಗಳ ಸ್ಕ್ರೀನ್ಶಾಟ್ ಸಹ ಹರಿದಾಡುತ್ತಿದೆ. ಆದರೆ ಇದು ಸುಳ್ಳು ಸುದ್ದಿ.