ಪೊಲೀಸರು ಮತ್ತು ಸಶಸ್ತ್ರ ಪಡೆ ಸಿಬ್ಬಂದಿ ಗಸ್ತು ತಿರುಗುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರು ಮತ್ತು ಪೊಲೀಸ್ ಠಾಣೆಯ ಮೇಲೆ ಒಂದು ಕಲ್ಲು ಬಿದ್ದರೂ, ಕಲ್ಲು ಎಸೆಯುವವರನ್ನು ಹಿಡಿದು ಅವರ ಕೈ, ಕಾಲನ್ನು ಮುರಿಯುವಂತೆ ಉತ್ತರ ಪ್ರದೇಶದ ಪೊಲೀಸರಿಗೆ ಆದೇಶ ನೀಡಲಾಗಿದೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯದಿಂದ ಅಮಾನತಿನಲ್ಲಿ ಇರಿಸಲಾಗುವುದು ಎಂಬ ಮಾಹಿತಿಯನ್ನು ಈ ವಿಡಿಯೊ ಜೊತೆ ನೀಡಲಾಗಿದೆ.