ವ್ಯಕ್ತಿಯೊಬ್ಬನನ್ನು ಗುಂಪೊಂದು ಮನಬಂದಂತೆ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಥಳಿತಕ್ಕೊಳಗಾದ ವ್ಯಕ್ತಿಯ ದೇಹದ ಹಲವು ಭಾಗಗಳಿಂದ ರಕ್ತ ಸುರಿಯುತ್ತಿದ್ದರೂ ಗುಂಪು ಆತನನ್ನು ಥಳಿಸುವುದನ್ನು ಮುಂದುವರಿಸುತ್ತದೆ. ‘ರಾಜಸ್ಥಾನದ ಜೋಧ್ಪುರದಲ್ಲಿಈದ್ ಹಬ್ಬದ ಸಮಯದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದ ದೃಶ್ಯ ಇದು. ಹಿಂದೂ ವ್ಯಕ್ತಿಯನ್ನು ಮುಸ್ಲಿಮರು ಹೊಡೆದು ಕೊಂದಿದ್ದಾರೆ. ಮುಸ್ಲಿಮರು ಹಿಂದೂಗಳನ್ನು ಕೊಲ್ಲಲಿ ಎಂದುರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದ್ದಾರೆ’ ಎಂಬ ವಿವರವನ್ನು ವಿಡಿಯೊಗೆ ನೀಡಲಾಗಿದೆ.