<p>ಅಶಾಂತಿ ಪೀಡಿತ ಬಾಂಗ್ಲಾದೇಶದಲ್ಲಿ ವಿಷ್ಣುವಿನ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ ಎಂದು ಪ್ರತಿಪಾದಿಸುತ್ತಾ ‘ಎಕ್ಸ್’ ಬಳಕೆದಾರರೊಬ್ಬರು, ವಿಷ್ಣುವಿನ ಬೃಹತ್ ವಿಗ್ರಹವನ್ನು ಎಕ್ಸ್ಕವೇಟರ್ ಮೂಲಕ ತೆರವುಗೊಳಿಸುತ್ತಿರುವ ಫೋಟೊವೊಂದನ್ನು ಹಂಚಿಕೊಂಡಿದ್ದಾರೆ. ಆದರೆ, ಇದು ಸುಳ್ಳು. </p>.<p>ಫೋಟೊವನ್ನು ರಿವರ್ಸ್ ಇಮೇಜ್ ಸರ್ಚ್ ವಿಧಾನದಲ್ಲಿ ಗೂಗಲ್ನಲ್ಲಿ ಹುಡುಕಿದಾಗ ದಿ ವೀಕ್ ಮತ್ತು ದ ಸ್ಟ್ರೈಟ್ಸ್ ಟೈಮ್ಸ್ನಲ್ಲಿ 2025ರ ಡಿಸೆಂಬರ್ನಲ್ಲಿ ಇದೇ ಫೋಟೊ ಸಹಿತ ವರದಿ ಪ್ರಕಟವಾಗಿದ್ದು ಕಂಡು ಬಂತು. ಈ ಘಟನೆಯು ಥಾಯ್ಲೆಂಡ್ ಮತ್ತು ಕಾಂಬೋಡಿಯಾ ಗಡಿಯಲ್ಲಿ ನಡೆದಿದೆ ಎಂದು ವರದಿಗಳಲ್ಲಿ ಹೇಳಲಾಗಿತ್ತು. ದ ಸ್ಟ್ರೈಟ್ಸ್ ಟೈಮ್ಸ್ ವರದಿ ಪ್ರಕಾರ, ಕಾಂಬೋಡಿಯಾಕ್ಕೆ ಸೇರಿದ ಜಾಗದಲ್ಲಿ 2014ರಲ್ಲಿ ವಿಷ್ಣುವಿನ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಥಾಯ್ಲೆಂಡ್ ಸೇನೆಯು 2025ರ ಡಿಸೆಂಬರ್ 22ರಂದು ಅದನ್ನು ತೆರವುಗೊಳಿಸಿದೆ. ಎರಡೂ ರಾಷ್ಟ್ರಗಳ ನಡುವೆ ಗಡಿ ಬಿಕ್ಕಟ್ಟು ತೀವ್ರವಾಗಿರುವ ಈ ಸಂದರ್ಭದಲ್ಲಿ ಭದ್ರತಾ ದೃಷ್ಟಿಯಿಂದ ಪ್ರತಿಮೆಯನ್ನು ತೆರವುಗೊಳಿಸಲಾಗಿದೆ ಎಂದು ಸರ್ಕಾರ ಹೇಳಿರುವುದಾಗಿ ಬ್ಯಾಂಕಾಕ್ ಪೋಸ್ಟ್ ವರದಿ ಮಾಡಿದೆ. ಡಿಸೆಂಬರ್ 24ರಂದು ಭಾರತವು ಈ ಕ್ರಮವನ್ನು ಖಂಡಿಸಿತ್ತು. ವಿದೇಶಾಂಗ ಇಲಾಖೆ ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿತ್ತು. ಥಾಯ್ಲೆಂಡ್–ಕಾಂಬೋಡಿಯಾ ಗಡಿಯಲ್ಲಿ ನಡೆದ ಘಟನೆಯನ್ನು ಬಾಂಗ್ಲಾದೇಶದಲ್ಲಿ ನಡೆದಿದ್ದು ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ಬೂಮ್ ಫ್ಯಾಕ್ಟ್ಚೆಕ್ ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಶಾಂತಿ ಪೀಡಿತ ಬಾಂಗ್ಲಾದೇಶದಲ್ಲಿ ವಿಷ್ಣುವಿನ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ ಎಂದು ಪ್ರತಿಪಾದಿಸುತ್ತಾ ‘ಎಕ್ಸ್’ ಬಳಕೆದಾರರೊಬ್ಬರು, ವಿಷ್ಣುವಿನ ಬೃಹತ್ ವಿಗ್ರಹವನ್ನು ಎಕ್ಸ್ಕವೇಟರ್ ಮೂಲಕ ತೆರವುಗೊಳಿಸುತ್ತಿರುವ ಫೋಟೊವೊಂದನ್ನು ಹಂಚಿಕೊಂಡಿದ್ದಾರೆ. ಆದರೆ, ಇದು ಸುಳ್ಳು. </p>.<p>ಫೋಟೊವನ್ನು ರಿವರ್ಸ್ ಇಮೇಜ್ ಸರ್ಚ್ ವಿಧಾನದಲ್ಲಿ ಗೂಗಲ್ನಲ್ಲಿ ಹುಡುಕಿದಾಗ ದಿ ವೀಕ್ ಮತ್ತು ದ ಸ್ಟ್ರೈಟ್ಸ್ ಟೈಮ್ಸ್ನಲ್ಲಿ 2025ರ ಡಿಸೆಂಬರ್ನಲ್ಲಿ ಇದೇ ಫೋಟೊ ಸಹಿತ ವರದಿ ಪ್ರಕಟವಾಗಿದ್ದು ಕಂಡು ಬಂತು. ಈ ಘಟನೆಯು ಥಾಯ್ಲೆಂಡ್ ಮತ್ತು ಕಾಂಬೋಡಿಯಾ ಗಡಿಯಲ್ಲಿ ನಡೆದಿದೆ ಎಂದು ವರದಿಗಳಲ್ಲಿ ಹೇಳಲಾಗಿತ್ತು. ದ ಸ್ಟ್ರೈಟ್ಸ್ ಟೈಮ್ಸ್ ವರದಿ ಪ್ರಕಾರ, ಕಾಂಬೋಡಿಯಾಕ್ಕೆ ಸೇರಿದ ಜಾಗದಲ್ಲಿ 2014ರಲ್ಲಿ ವಿಷ್ಣುವಿನ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಥಾಯ್ಲೆಂಡ್ ಸೇನೆಯು 2025ರ ಡಿಸೆಂಬರ್ 22ರಂದು ಅದನ್ನು ತೆರವುಗೊಳಿಸಿದೆ. ಎರಡೂ ರಾಷ್ಟ್ರಗಳ ನಡುವೆ ಗಡಿ ಬಿಕ್ಕಟ್ಟು ತೀವ್ರವಾಗಿರುವ ಈ ಸಂದರ್ಭದಲ್ಲಿ ಭದ್ರತಾ ದೃಷ್ಟಿಯಿಂದ ಪ್ರತಿಮೆಯನ್ನು ತೆರವುಗೊಳಿಸಲಾಗಿದೆ ಎಂದು ಸರ್ಕಾರ ಹೇಳಿರುವುದಾಗಿ ಬ್ಯಾಂಕಾಕ್ ಪೋಸ್ಟ್ ವರದಿ ಮಾಡಿದೆ. ಡಿಸೆಂಬರ್ 24ರಂದು ಭಾರತವು ಈ ಕ್ರಮವನ್ನು ಖಂಡಿಸಿತ್ತು. ವಿದೇಶಾಂಗ ಇಲಾಖೆ ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿತ್ತು. ಥಾಯ್ಲೆಂಡ್–ಕಾಂಬೋಡಿಯಾ ಗಡಿಯಲ್ಲಿ ನಡೆದ ಘಟನೆಯನ್ನು ಬಾಂಗ್ಲಾದೇಶದಲ್ಲಿ ನಡೆದಿದ್ದು ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ಬೂಮ್ ಫ್ಯಾಕ್ಟ್ಚೆಕ್ ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>