2022ರಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕೆ ರಾಜಕೀಯ ಪಕ್ಷಗಳ ಬಿರುಸಿನ ತಯಾರಿ ನಡೆದಿದ್ದು, ರಾಜಕೀಯ ನಾಯಕರು ಜನರ ಮನವೊಲಿಸುವ ಯತ್ನದಲ್ಲಿ ತೊಡಗಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮಾಡಿರುವ ಒಂದು ಟ್ವೀಟ್ ಸದ್ಯ ಸುದ್ದಿಗೆ ಗ್ರಾಸವಾಗಿದೆ. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ರಾಮಮಂದಿರ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಬಾಬರಿ ಮಸೀದಿ ಕಟ್ಟುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ ಎನ್ನಲಾಗಿದೆ. ಇದರ ಸ್ಕ್ರೀನ್ಶಾಟ್ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.