<p>ಒಂದಿಷ್ಟು ಜನರ ಗುಂಪು ಗೋಧಿ ಹಿಟ್ಟಿನ ಚೀಲಕ್ಕಾಗಿ ಬೀದಿಯಲ್ಲಿ ಬಡಿದಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನದಲ್ಲಿ ಜನರಿಗೆ ತಿನ್ನಲೂ ಅನ್ನವಿಲ್ಲ ಎಂಬುದನ್ನು ಈ ವಿಡಿಯೊ ಸೂಚಿಸುತ್ತದೆ ಎಂದು ಜಾಲತಾಣ ಬಳಕೆದಾರರು ಉಲ್ಲೇಖಿಸಿದ್ದಾರೆ. ಉತ್ತರ ಪ್ರದೇಶದ ಶಾಸಕ ಶಲಭ್ ಮಣಿ ತ್ರಿಪಾಠಿ ಸೇರಿದಂತೆ ಹಲವರು ಈ ವಿಡಿಯೊವನ್ನು ಹಂಚಿಕೊಂಡಿದ್ದು, ಶ್ರೀಲಂಕಾದಂತೆ ಪಾಕಿಸ್ತಾನದ ಸ್ಥಿತಿಯೂ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಭಾರತದ ಸ್ಥಿತಿ ಉತ್ತಮವಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ, ಈ ವಿಡಿಯೊ ಹಳೆಯದು.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವ ಈ ವಿಡಿಯೊ ಪಾಕಿಸ್ತಾನದ ಈಗಿನ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿದ್ದಲ್ಲ ಎಂದು ‘ಆಲ್ಟ್ ನ್ಯೂಸ್’ ವೆಬ್ಸೈಟ್ ವರದಿ ಮಾಡಿದೆ. ಪಾಕಿಸ್ತಾನವು ಈ ಹಿಂದೆ ಭೀಕರ ಪ್ರವಾಹಕ್ಕೆ ಒಳಗಾದ ಸಮಯದಲ್ಲಿ ನೀಡಲಾಗಿದ್ದ ಆಹಾರದ ಪೊಟ್ಟಣಗಳಿಗಾಗಿ ಸಂತ್ರಸ್ತರು ಮುಗಿಬಿದ್ದಿದ್ದರು. ಈ ವಿಡಿಯೊ ಕನಿಷ್ಠ ನಾಲ್ಕು ತಿಂಗಳು ಹಳೆಯದಾಗಿದ್ದು, ಈಗಿನ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟನ್ನು ಕುರಿತದ್ದು ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ವೆಬ್ಸೈಟ್ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಒಂದಿಷ್ಟು ಜನರ ಗುಂಪು ಗೋಧಿ ಹಿಟ್ಟಿನ ಚೀಲಕ್ಕಾಗಿ ಬೀದಿಯಲ್ಲಿ ಬಡಿದಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನದಲ್ಲಿ ಜನರಿಗೆ ತಿನ್ನಲೂ ಅನ್ನವಿಲ್ಲ ಎಂಬುದನ್ನು ಈ ವಿಡಿಯೊ ಸೂಚಿಸುತ್ತದೆ ಎಂದು ಜಾಲತಾಣ ಬಳಕೆದಾರರು ಉಲ್ಲೇಖಿಸಿದ್ದಾರೆ. ಉತ್ತರ ಪ್ರದೇಶದ ಶಾಸಕ ಶಲಭ್ ಮಣಿ ತ್ರಿಪಾಠಿ ಸೇರಿದಂತೆ ಹಲವರು ಈ ವಿಡಿಯೊವನ್ನು ಹಂಚಿಕೊಂಡಿದ್ದು, ಶ್ರೀಲಂಕಾದಂತೆ ಪಾಕಿಸ್ತಾನದ ಸ್ಥಿತಿಯೂ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಭಾರತದ ಸ್ಥಿತಿ ಉತ್ತಮವಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ, ಈ ವಿಡಿಯೊ ಹಳೆಯದು.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವ ಈ ವಿಡಿಯೊ ಪಾಕಿಸ್ತಾನದ ಈಗಿನ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿದ್ದಲ್ಲ ಎಂದು ‘ಆಲ್ಟ್ ನ್ಯೂಸ್’ ವೆಬ್ಸೈಟ್ ವರದಿ ಮಾಡಿದೆ. ಪಾಕಿಸ್ತಾನವು ಈ ಹಿಂದೆ ಭೀಕರ ಪ್ರವಾಹಕ್ಕೆ ಒಳಗಾದ ಸಮಯದಲ್ಲಿ ನೀಡಲಾಗಿದ್ದ ಆಹಾರದ ಪೊಟ್ಟಣಗಳಿಗಾಗಿ ಸಂತ್ರಸ್ತರು ಮುಗಿಬಿದ್ದಿದ್ದರು. ಈ ವಿಡಿಯೊ ಕನಿಷ್ಠ ನಾಲ್ಕು ತಿಂಗಳು ಹಳೆಯದಾಗಿದ್ದು, ಈಗಿನ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟನ್ನು ಕುರಿತದ್ದು ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ವೆಬ್ಸೈಟ್ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>