‘1966, ಗೋಪಾಷ್ಟಮಿ (ಗೋವುಗಳನ್ನು ಪೂಜಿಸುವ ಹಬ್ಬ) ತಿಥಿಯಂದು, 3–7 ಲಕ್ಷ ಸಾಧುಗಳು ಗೋಹತ್ಯೆ ನಿಲ್ಲಿಸುವ ಕಾಯಿದೆ ಜಾರಿ ಮಾಡಬೇಕೆಂದು ದೆಹಲಿಯಲ್ಲಿ ಹಸುಗಳೊಂದಿಗೆ ಪ್ರತಿಭಟಿಸುತ್ತಾರೆ. ಪ್ರಧಾನಿ ಇಂದಿರಾಗಾಂಧಿ ಗೋಲೀಬಾರ್ಗೆ ಆದೇಶಿಸುತ್ತಾಳೆ. ಸುಮಾರು 5,000 ಸಾಧು ಸಂತರನ್ನು ಮತ್ತು ಹಸುಗಳನ್ನು ಗುಂಡಿಕ್ಕಿ ಕೊಲ್ಲಲಾಗುತ್ತದೆ...’ ಎಂಬ ಮಾಹಿತಿ ಇರುವ ಪೋಸ್ಟ್ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಅದರಲ್ಲಿ ನೀಡಿರುವ ಹಲವು ಮಾಹಿತಿಗಳು ತಪ್ಪಾಗಿವೆ.