<p><strong>ಜಬಲ್ಪುರ:</strong> ನರ್ಮದಾ ನದಿಗೆ ನಿರ್ಮಿಸಲಾಗಿರುವ ಬಾರ್ಗಿ ಅಣೆಕಟ್ಟೆಯಲ್ಲಿ ಪ್ರವಾಸಿಗರು ಇದ್ದ ಬೋಟ್ ಮಗುಚಿ 9 ಜನ ಮೃತಪಟ್ಟು, ನಾಲ್ವರು ನಾಪತ್ತೆಯಾಗಿದ್ದಾರೆ. ಈ ದುರಂತವು ಮಧ್ಯಪ್ರದೇಶದ ಜಬಲ್ಪುರದಲ್ಲಿ ಏಪ್ರಿಲ್ 30ರಂದು (ಗುರುವಾರ) ಸಂಜೆ ಸಂಭವಿಸಿದೆ. </p><p>ದುರ್ಘಟನೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೊಗಳು, ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ದುರಂತದ ವೇಳೆ ತಾಯಿ ಹಾಗೂ ಮಗು ಒಬ್ಬರನ್ನೊಬ್ಬರು ಬಿಗಿದಪ್ಪಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ ಎನ್ನಲಾದ ಚಿತ್ರವೊಂದು ನೋಡುಗರ ಮನಕಲಕುತ್ತಿದೆ.</p><p>ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಮುಳುಗುತಜ್ಞರೊಬ್ಬರು, ತಾಯಿಯ ತೋಳುಗಳಲ್ಲಿ ಮಗುವನ್ನು ನೋಡಿ ಆಘಾತವಾಯಿತು ಎಂದು ಮಾಧ್ಯಮದವರ ಎದುರು ಹೇಳಿದ್ದರು. ಅವರು ಹೇಳಿದ ವಿಚಾರ ನಿಜವೇ. ಆದರೆ, ಹರಿದಾಡುತ್ತಿರುವ ಚಿತ್ರ ನಕಲಿ ಎಂಬುದು ಇದೀಗ ಬಹಿರಂಗವಾಗಿದೆ. ಈ ವಿಚಾರವನ್ನು ಜಬಲ್ಪುರ ಜಿಲ್ಲಾಧಿಕಾರಿಯೇ ಖಚಿತಪಡಿಸಿದ್ದಾರೆ.</p>.ಜಬಲ್ಪುರ ಬೋಟ್ ದುರಂತಕ್ಕೆ ಸುರಕ್ಷತಾ ವೈಫಲ್ಯವೇ ಕಾರಣ: ವಿಡಿಯೊದಲ್ಲಿ ಕಾಣುವುದೇನು?.ತಾಯಿನೇ ಎಲ್ಲ.. ಬದಲಾಗೋದಿಲ್ಲ.. ಜಬಲ್ಪುರ ಬೋಟ್ ದುರಂತದಲ್ಲಿ ಮನಕಲಕುವ ಘಟನೆ.<p>ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿರುವ ಜಬಲ್ಪುರ ಜಿಲ್ಲಾಧಿಕಾರಿ ಖಾತೆಯಲ್ಲಿ, 'ವ್ಯಾಪಕವಾಗಿ ಹಂಚಿಕೆಯಾಗುತ್ತಿರುವ ಚಿತ್ರವು ಎಐ ಮೂಲಕ ರೂಪಿಸಿದ್ದಾಗಿದೆ. ಅದು ನಿಜವಲ್ಲ' ಎಂಬುದಾಗಿ ಪೋಸ್ಟ್ ಹಂಚಿಕೊಳ್ಳಲಾಗಿದೆ.</p><p>ಏತನ್ಮಧ್ಯೆ, ಮೂವರು ಮಕ್ಕಳು ಸೇರಿದಂತೆ ನಾಪತ್ತೆಯಾಗಿರುವ ನಾಲ್ವರಿಗಾಗಿ ಸೇನೆಯ ಮುಳುಗುತಜ್ಞರು ಮತ್ತು ವಿಪತ್ತು ನಿರ್ವಹಣಾ ತಂಡಗಳು ಹುಡುಕಾಟ ಮುಂದುವರಿಸಿವೆ. ಬಾರ್ಗಿ ಅಣೆಕಟ್ಟೆಯ ಹಿನ್ನೀರಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>ದುರಂತಕ್ಕೀಡಾದ ಬೋಟ್ನಲ್ಲಿ ಒಟ್ಟು 41 ಜನರಿದ್ದರು. ಅವರಲ್ಲಿ 28 ಮಂದಿಯನ್ನು ರಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಬಲ್ಪುರ:</strong> ನರ್ಮದಾ ನದಿಗೆ ನಿರ್ಮಿಸಲಾಗಿರುವ ಬಾರ್ಗಿ ಅಣೆಕಟ್ಟೆಯಲ್ಲಿ ಪ್ರವಾಸಿಗರು ಇದ್ದ ಬೋಟ್ ಮಗುಚಿ 9 ಜನ ಮೃತಪಟ್ಟು, ನಾಲ್ವರು ನಾಪತ್ತೆಯಾಗಿದ್ದಾರೆ. ಈ ದುರಂತವು ಮಧ್ಯಪ್ರದೇಶದ ಜಬಲ್ಪುರದಲ್ಲಿ ಏಪ್ರಿಲ್ 30ರಂದು (ಗುರುವಾರ) ಸಂಜೆ ಸಂಭವಿಸಿದೆ. </p><p>ದುರ್ಘಟನೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೊಗಳು, ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ದುರಂತದ ವೇಳೆ ತಾಯಿ ಹಾಗೂ ಮಗು ಒಬ್ಬರನ್ನೊಬ್ಬರು ಬಿಗಿದಪ್ಪಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ ಎನ್ನಲಾದ ಚಿತ್ರವೊಂದು ನೋಡುಗರ ಮನಕಲಕುತ್ತಿದೆ.</p><p>ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಮುಳುಗುತಜ್ಞರೊಬ್ಬರು, ತಾಯಿಯ ತೋಳುಗಳಲ್ಲಿ ಮಗುವನ್ನು ನೋಡಿ ಆಘಾತವಾಯಿತು ಎಂದು ಮಾಧ್ಯಮದವರ ಎದುರು ಹೇಳಿದ್ದರು. ಅವರು ಹೇಳಿದ ವಿಚಾರ ನಿಜವೇ. ಆದರೆ, ಹರಿದಾಡುತ್ತಿರುವ ಚಿತ್ರ ನಕಲಿ ಎಂಬುದು ಇದೀಗ ಬಹಿರಂಗವಾಗಿದೆ. ಈ ವಿಚಾರವನ್ನು ಜಬಲ್ಪುರ ಜಿಲ್ಲಾಧಿಕಾರಿಯೇ ಖಚಿತಪಡಿಸಿದ್ದಾರೆ.</p>.ಜಬಲ್ಪುರ ಬೋಟ್ ದುರಂತಕ್ಕೆ ಸುರಕ್ಷತಾ ವೈಫಲ್ಯವೇ ಕಾರಣ: ವಿಡಿಯೊದಲ್ಲಿ ಕಾಣುವುದೇನು?.ತಾಯಿನೇ ಎಲ್ಲ.. ಬದಲಾಗೋದಿಲ್ಲ.. ಜಬಲ್ಪುರ ಬೋಟ್ ದುರಂತದಲ್ಲಿ ಮನಕಲಕುವ ಘಟನೆ.<p>ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿರುವ ಜಬಲ್ಪುರ ಜಿಲ್ಲಾಧಿಕಾರಿ ಖಾತೆಯಲ್ಲಿ, 'ವ್ಯಾಪಕವಾಗಿ ಹಂಚಿಕೆಯಾಗುತ್ತಿರುವ ಚಿತ್ರವು ಎಐ ಮೂಲಕ ರೂಪಿಸಿದ್ದಾಗಿದೆ. ಅದು ನಿಜವಲ್ಲ' ಎಂಬುದಾಗಿ ಪೋಸ್ಟ್ ಹಂಚಿಕೊಳ್ಳಲಾಗಿದೆ.</p><p>ಏತನ್ಮಧ್ಯೆ, ಮೂವರು ಮಕ್ಕಳು ಸೇರಿದಂತೆ ನಾಪತ್ತೆಯಾಗಿರುವ ನಾಲ್ವರಿಗಾಗಿ ಸೇನೆಯ ಮುಳುಗುತಜ್ಞರು ಮತ್ತು ವಿಪತ್ತು ನಿರ್ವಹಣಾ ತಂಡಗಳು ಹುಡುಕಾಟ ಮುಂದುವರಿಸಿವೆ. ಬಾರ್ಗಿ ಅಣೆಕಟ್ಟೆಯ ಹಿನ್ನೀರಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>ದುರಂತಕ್ಕೀಡಾದ ಬೋಟ್ನಲ್ಲಿ ಒಟ್ಟು 41 ಜನರಿದ್ದರು. ಅವರಲ್ಲಿ 28 ಮಂದಿಯನ್ನು ರಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>