<figcaption>""</figcaption>.<p>ಮುಸ್ಲಿಂ ಯುವಕನೊಬ್ಬ ದೇವರ ವಿಗ್ರಹದ ಮೇಲೆ ಕಾಲು ಇಟ್ಟಿದ್ದಾನೆ ಎಂಬ ಬರಹ ಇರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕನೊಬ್ಬ ದೇವರ ಕಲ್ಲಿನ ವಿಗ್ರಹದ ಮೇಲೆ ಷೂಕಾಲು ಇರಿಸಿರುವ ಈ ಚಿತ್ರದ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹಲವರು ವ್ಯಕ್ತಪಡಿಸಿದ್ದಾರೆ. ಪತ್ರಕರ್ತ ಅರ್ನಬ್ ಗೋಸ್ವಾಮಿ ಸಹ ಈ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಈ ಮುಸ್ಲಿಂ ಯುವಕನ್ನು ಕೊಚ್ಚಿಕೊಲ್ಲಬೇಕು ಎಂದು ಹಲವರು ಕಿಡಿಕಾರಿದ್ದಾರೆ.</p>.<p>ದೇವರ ವಿಗ್ರಹವನ್ನು ತುಳಿಯುತ್ತಿರುವ ಯುವಕ ಮುಸ್ಲಿಂ ಸಮುದಾಯದವನಲ್ಲ, ಆತ ಹಿಂದೂ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಭೀಮ್ ಆರ್ಮಿಯ ಸದಸ್ಯನಾದ ಲೋಧಿ ಗೌತಮ್ ಎಂಬ ಯುವಕ ಈ ಕೃತ್ಯ ಎಸಗಿದ್ದಾನೆ. ಈತನ ವಿರುದ್ಧ ದೂರು ದಾಖಲಾಗಿದ್ದು, ವಾರಾಣಸಿಯ ಮಿರ್ಜಾಮುರದ್ ಪೊಲೀಸರು ಆತನ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ. ಮೇ ತಿಂಗಳಿನಲ್ಲಿ ಕೃತ್ಯ ನಡೆದಿದ್ದು, ತಪ್ಪಿತಸ್ಥನನ್ನು ಅದೇ ತಿಂಗಳಿನಲ್ಲೇ ಜೈಲಿಗೆ ಕಳುಹಿಸಲಾಗಿದೆ ಎಂದು ವಾರಾಣಸಿ ಪೊಲೀಸರು ಮೇ 11ರಂದು ಟ್ವೀಟ್ ಮಾಡಿದ್ದಾರೆ. ಆ ಟ್ವೀಟ್ನಲ್ಲಿ ಇದ್ದ ಚಿತ್ರವನ್ನು ಬಳಸಿಕೊಂಡು, ಮುಸ್ಲಿಮರು ಈ ಕೃತ್ಯ ಎಸಗಿದ್ದಾರೆ ಎಂದು ಸುಳ್ಳುಸುದ್ದಿ ಹಬ್ಬಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p>ಮುಸ್ಲಿಂ ಯುವಕನೊಬ್ಬ ದೇವರ ವಿಗ್ರಹದ ಮೇಲೆ ಕಾಲು ಇಟ್ಟಿದ್ದಾನೆ ಎಂಬ ಬರಹ ಇರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕನೊಬ್ಬ ದೇವರ ಕಲ್ಲಿನ ವಿಗ್ರಹದ ಮೇಲೆ ಷೂಕಾಲು ಇರಿಸಿರುವ ಈ ಚಿತ್ರದ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹಲವರು ವ್ಯಕ್ತಪಡಿಸಿದ್ದಾರೆ. ಪತ್ರಕರ್ತ ಅರ್ನಬ್ ಗೋಸ್ವಾಮಿ ಸಹ ಈ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಈ ಮುಸ್ಲಿಂ ಯುವಕನ್ನು ಕೊಚ್ಚಿಕೊಲ್ಲಬೇಕು ಎಂದು ಹಲವರು ಕಿಡಿಕಾರಿದ್ದಾರೆ.</p>.<p>ದೇವರ ವಿಗ್ರಹವನ್ನು ತುಳಿಯುತ್ತಿರುವ ಯುವಕ ಮುಸ್ಲಿಂ ಸಮುದಾಯದವನಲ್ಲ, ಆತ ಹಿಂದೂ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಭೀಮ್ ಆರ್ಮಿಯ ಸದಸ್ಯನಾದ ಲೋಧಿ ಗೌತಮ್ ಎಂಬ ಯುವಕ ಈ ಕೃತ್ಯ ಎಸಗಿದ್ದಾನೆ. ಈತನ ವಿರುದ್ಧ ದೂರು ದಾಖಲಾಗಿದ್ದು, ವಾರಾಣಸಿಯ ಮಿರ್ಜಾಮುರದ್ ಪೊಲೀಸರು ಆತನ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ. ಮೇ ತಿಂಗಳಿನಲ್ಲಿ ಕೃತ್ಯ ನಡೆದಿದ್ದು, ತಪ್ಪಿತಸ್ಥನನ್ನು ಅದೇ ತಿಂಗಳಿನಲ್ಲೇ ಜೈಲಿಗೆ ಕಳುಹಿಸಲಾಗಿದೆ ಎಂದು ವಾರಾಣಸಿ ಪೊಲೀಸರು ಮೇ 11ರಂದು ಟ್ವೀಟ್ ಮಾಡಿದ್ದಾರೆ. ಆ ಟ್ವೀಟ್ನಲ್ಲಿ ಇದ್ದ ಚಿತ್ರವನ್ನು ಬಳಸಿಕೊಂಡು, ಮುಸ್ಲಿಮರು ಈ ಕೃತ್ಯ ಎಸಗಿದ್ದಾರೆ ಎಂದು ಸುಳ್ಳುಸುದ್ದಿ ಹಬ್ಬಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>