<p><strong>ನವದೆಹಲಿ: </strong>ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಜ್ಞರೊಂದಿಗೆ ಸಮಾಲೋಚನೆ ನಡೆಸದೆ ಲಾಕ್ಡೌನ್ ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಕ್ಯಾರವಾನ್ ನಿಯತಕಾಲಿಕೆ ಮಾಡಿದ್ದ ವರದಿ ಸುಳ್ಳು ಎಂದು ಪಿಐಬಿಸ್ಪಷ್ಟ ಪಡಿಸಿದೆ.</p>.<p>‘ಲಾಕ್ಡೌನ್ ಮುಂದುವರಿಸುವ ನಿರ್ಧಾರ ಘೋಷಿಸುವ ಮುನ್ನ ಪ್ರಧಾನಿ ಮೋದಿ ಅವರು ಕೋವಿಡ್–19 ನಿಯಂತ್ರಣ ಸಂಬಂಧ ರಚಿಸಲಾಗಿರುವ 21 ತಜ್ಞರನ್ನೊಳಗೊಂಡ ಕಾರ್ಯಪಡೆಯನ್ನು ಒಮ್ಮೆಯೂ ಭೇಟಿಯಾಗಿರಲಿಲ್ಲ’ ಎಂದು ಏಪ್ರಿಲ್ 15 ರಂದು ವರದಿ ಮಾಡಿತ್ತು.</p>.<p>‘ನಿರ್ಧಾರ ಕೈಗೊಳ್ಳುವ ಮುನ್ನತಜ್ಞರೊಟ್ಟಿಗೆಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿಕೊಳ್ಳುವ ಉದ್ದೇಶದಿಂದ ಕಾರ್ಯಪಡೆಯನ್ನು ರಚಿಸಲಾಗಿದೆ ಎನ್ನುವಂತೆ ತೋರುತ್ತಿದೆ’ ಎಂದು ಕಾರ್ಯಪಡೆಯ ಹೆಸರು ಹೇಳಲು ಬಯಸದಸದಸ್ಯರೊಬ್ಬರು ಹೇಳಿರುವುದಾಗಿ ನಿಯತಕಾಲಿಕೆ ಉಲ್ಲೇಖಿಸಿತ್ತು.</p>.<p><strong>ಇದನ್ನೂ ಓದಿ:</strong><a href="http://https://www.prajavani.net/stories/stateregional/21-day-lock-down-from-today-714955.html" target="_blank">ಇಂದಿನಿಂದ 21 ದಿನ ದಿಗ್ಬಂಧನ</a></p>.<p>ಈ ಬಗ್ಗೆ ಟ್ವಿಟರ್ನಲ್ಲಿ ಸ್ಪಷ್ಟನೆ ನೀಡಿರುವ ಪಿಐಬಿ, ‘21 ವಿಜ್ಞಾನಿಗಳನ್ನೊಳಗೊಂಡ ಕೋವಿಡ್ ಕಾರ್ಯಪಡೆಯೊಂದಿಗೆ ಸಮಾಲೋಚನೆ ನಡೆಸದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲಾಕ್ಡೌನ್ ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಕ್ಯಾರವಾನ್ ನಿಯತಕಾಲಿಗೆ ವರದಿ ಮಾಡಿದೆ’</p>.<p>‘ವಾಸ್ತವವೇನೆಂದರೆ, ಕಾರ್ಯಪಡೆಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ತಿಳಿಸಿದೆ.</p>.<p>ಜಗತ್ತಿನಾದ್ಯಂತ ಭೀತಿ ಸೃಷ್ಟಿಸಿರುವಕೊರೊನಾವೈರಸ್ ನಿಯಂತ್ರಣದ ಸಲುವಾಗಿಮೋದಿ ಅವರು ಮಾರ್ಚ್ 24ರಂದು ದೇಶದಾದ್ಯಂತ 21 ದಿನಗಳ ಲಾಕ್ಡೌನ್ ಘೋಷಿಸಿದ್ದರು. ಅದರಂತೆ ಏಪ್ರಿಲ್ 14ಕ್ಕೆ ಲಾಕ್ಡೌನ್ ಮುಗಿಯಬೇಕಿತ್ತು. ಆದರೆ, ಸೋಂಕು ಮತ್ತಷ್ಟು ಹರಡುವ ಸಾಧ್ಯತೆ ಇರುವುದರಿಂದ ಅದನ್ನು ಎರಡನೇ ಹಂತದಲ್ಲಿಮುಂದುವರಿಸಲು ಆದೇಶಿಸಲಾಗಿದೆ.ಮೇ 3ರ ವರೆಗೆಮುಂದುವರಿಯಲಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/we-the-people-of-india-pm-narendra-modi-india-fight-against-covid19-coronavirus-719721.html" target="_blank">ಮೇ 3ರ ವರೆಗೂ ದೇಶದಾದ್ಯಂತ ಲಾಕ್ಡೌನ್ ಮುಂದುವರಿಕೆ: ಮೋದಿ </a></p>.<p>ಜಗತ್ತಿನಾದ್ಯಂತ ಸುಮಾರು 1.4 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿಪಡೆದಿರುವ ಕೋವಿಡ್–19 ಸೋಂಕುಸುಮಾರು 21 ಲಕ್ಷ ಜನರಲ್ಲಿ ಇರುವುದು ದೃಢಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಜ್ಞರೊಂದಿಗೆ ಸಮಾಲೋಚನೆ ನಡೆಸದೆ ಲಾಕ್ಡೌನ್ ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಕ್ಯಾರವಾನ್ ನಿಯತಕಾಲಿಕೆ ಮಾಡಿದ್ದ ವರದಿ ಸುಳ್ಳು ಎಂದು ಪಿಐಬಿಸ್ಪಷ್ಟ ಪಡಿಸಿದೆ.</p>.<p>‘ಲಾಕ್ಡೌನ್ ಮುಂದುವರಿಸುವ ನಿರ್ಧಾರ ಘೋಷಿಸುವ ಮುನ್ನ ಪ್ರಧಾನಿ ಮೋದಿ ಅವರು ಕೋವಿಡ್–19 ನಿಯಂತ್ರಣ ಸಂಬಂಧ ರಚಿಸಲಾಗಿರುವ 21 ತಜ್ಞರನ್ನೊಳಗೊಂಡ ಕಾರ್ಯಪಡೆಯನ್ನು ಒಮ್ಮೆಯೂ ಭೇಟಿಯಾಗಿರಲಿಲ್ಲ’ ಎಂದು ಏಪ್ರಿಲ್ 15 ರಂದು ವರದಿ ಮಾಡಿತ್ತು.</p>.<p>‘ನಿರ್ಧಾರ ಕೈಗೊಳ್ಳುವ ಮುನ್ನತಜ್ಞರೊಟ್ಟಿಗೆಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿಕೊಳ್ಳುವ ಉದ್ದೇಶದಿಂದ ಕಾರ್ಯಪಡೆಯನ್ನು ರಚಿಸಲಾಗಿದೆ ಎನ್ನುವಂತೆ ತೋರುತ್ತಿದೆ’ ಎಂದು ಕಾರ್ಯಪಡೆಯ ಹೆಸರು ಹೇಳಲು ಬಯಸದಸದಸ್ಯರೊಬ್ಬರು ಹೇಳಿರುವುದಾಗಿ ನಿಯತಕಾಲಿಕೆ ಉಲ್ಲೇಖಿಸಿತ್ತು.</p>.<p><strong>ಇದನ್ನೂ ಓದಿ:</strong><a href="http://https://www.prajavani.net/stories/stateregional/21-day-lock-down-from-today-714955.html" target="_blank">ಇಂದಿನಿಂದ 21 ದಿನ ದಿಗ್ಬಂಧನ</a></p>.<p>ಈ ಬಗ್ಗೆ ಟ್ವಿಟರ್ನಲ್ಲಿ ಸ್ಪಷ್ಟನೆ ನೀಡಿರುವ ಪಿಐಬಿ, ‘21 ವಿಜ್ಞಾನಿಗಳನ್ನೊಳಗೊಂಡ ಕೋವಿಡ್ ಕಾರ್ಯಪಡೆಯೊಂದಿಗೆ ಸಮಾಲೋಚನೆ ನಡೆಸದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲಾಕ್ಡೌನ್ ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಕ್ಯಾರವಾನ್ ನಿಯತಕಾಲಿಗೆ ವರದಿ ಮಾಡಿದೆ’</p>.<p>‘ವಾಸ್ತವವೇನೆಂದರೆ, ಕಾರ್ಯಪಡೆಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ತಿಳಿಸಿದೆ.</p>.<p>ಜಗತ್ತಿನಾದ್ಯಂತ ಭೀತಿ ಸೃಷ್ಟಿಸಿರುವಕೊರೊನಾವೈರಸ್ ನಿಯಂತ್ರಣದ ಸಲುವಾಗಿಮೋದಿ ಅವರು ಮಾರ್ಚ್ 24ರಂದು ದೇಶದಾದ್ಯಂತ 21 ದಿನಗಳ ಲಾಕ್ಡೌನ್ ಘೋಷಿಸಿದ್ದರು. ಅದರಂತೆ ಏಪ್ರಿಲ್ 14ಕ್ಕೆ ಲಾಕ್ಡೌನ್ ಮುಗಿಯಬೇಕಿತ್ತು. ಆದರೆ, ಸೋಂಕು ಮತ್ತಷ್ಟು ಹರಡುವ ಸಾಧ್ಯತೆ ಇರುವುದರಿಂದ ಅದನ್ನು ಎರಡನೇ ಹಂತದಲ್ಲಿಮುಂದುವರಿಸಲು ಆದೇಶಿಸಲಾಗಿದೆ.ಮೇ 3ರ ವರೆಗೆಮುಂದುವರಿಯಲಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/we-the-people-of-india-pm-narendra-modi-india-fight-against-covid19-coronavirus-719721.html" target="_blank">ಮೇ 3ರ ವರೆಗೂ ದೇಶದಾದ್ಯಂತ ಲಾಕ್ಡೌನ್ ಮುಂದುವರಿಕೆ: ಮೋದಿ </a></p>.<p>ಜಗತ್ತಿನಾದ್ಯಂತ ಸುಮಾರು 1.4 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿಪಡೆದಿರುವ ಕೋವಿಡ್–19 ಸೋಂಕುಸುಮಾರು 21 ಲಕ್ಷ ಜನರಲ್ಲಿ ಇರುವುದು ದೃಢಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>