ತಪ್ಪು: ಲಾಕ್ಡೌನ್ನಿಂದಾಗಿ ದಿನಗೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದವರ ಜೀವನೋಪಾಯ ಕಷ್ಟದಲ್ಲಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ (ಪಿಎಂಜಿಕೆವೈ) ಫಲಾನುಭವಿಗಳಿಗೆ ಸರ್ಕಾರವು ₹500 ಹಣ ಸಂದಾಯ ಮಾಡಿದೆ. ಆದರೆ, ಫಲಾನುಭವಿಗಳು ತಮ್ಮ ಖಾತೆಗೆ ಸಂದಾಯವಾಗಿರುವ ಹಣವನ್ನು ನಿಗದಿತ ಸಮಯದೊಳಗೆ ಡ್ರಾ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಸರ್ಕಾರ ಹಣ ಹಿಂಪಡೆಯಲಿದೆ ಎಂಬ ವದಂತಿ ಹರಿದಾಡುತ್ತಿದೆ.