ಕಾಶಿ ವಿಶ್ವನಾಥ ಧಾಮವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿಯ ನೈರ್ಮಲ್ಯ ಕಾರ್ಯಕರ್ತರ ಮೇಲೆ ಹೂವಿನ ದಳಗಳನ್ನು ಸುರಿದಿದ್ದರು. ವಾಹಿನಿಯೊಂದರ ಸುದ್ದಿ ನಿರೂಪಕರು ಈ ಸುದ್ದಿ ನಿರೂಪಿಸುವ ವೇಳೆ, ತಾಜ್ಮಹಲ್ ನಿರ್ಮಿಸಿದ್ದವರ ಕೈಗಳನ್ನು ಮೊಘಲ್ ದೊರೆ ಶಾಜಹಾನ್ ಕತ್ತರಿಸಿದ್ದ. ಮೋದಿ ನೈರ್ಮಲ್ಯ ಕಾರ್ಯಕರ್ತರಿಗೆ ಹೂವಿನ ಅಭಿಷೇಕ ಮಾಡಿದರು ಎಂದಿದ್ದರು. ಇದಾದ ಬಳಿಕ ಕೇಂದ್ರ ಸಚಿವರೂ ಸೇರಿ ಹಲವರು ಶಾಜಹಾನ್, ಕಾರ್ಮಿಕರ ಕೈ ಕತ್ತರಿಸಿದ್ದರ ಕುರಿತು ಹೇಳಿಕೆಗಳನ್ನು ನೀಡಿದ್ದರು ಮತ್ತು ಟ್ವೀಟ್ಗಳನ್ನು ಮಾಡಿದ್ದರು.