ಸಿಖ್ ಧರ್ಮೀಯರೊಬ್ಬರು ಮಸೀದಿಯಲ್ಲಿ ನಮಾಜ್ ಮಾಡುತ್ತಿರುವ ಚಿತ್ರವೊಂದು ಇತ್ತೀಚೆಗೆ ಸುದ್ದಿಯಲ್ಲಿದೆ. ‘ಈ ವ್ಯಕ್ತಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಮಸೀದಿಗೆ ಹೋಗುವ ಮುನ್ನ ಸಿಖ್ಖರ ಮುಂಡಾಸು ತೆಗೆಯಲು ಮರೆತಿದ್ದಾರೆ’ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜನರು ಚರ್ಚೆ ನಡೆಸುತ್ತಿದ್ದಾರೆ. ‘ರೈತರ ಹೆಸರಿನಲ್ಲಿ ಕಮ್ಯುನಿಸ್ಟರು, ದೇಶದ್ರೋಹಿಗಳು, ಜಿಹಾದಿಗಳು ತಮ್ಮ ಕೊಳಕುಗಳನ್ನು ತೊಳೆದುಕೊಳ್ಳುತ್ತಿದ್ದಾರೆ’ ಎಂದು ಟ್ವಿಟರ್ ಬಳಕೆದಾರರೊಬ್ಬರು ಬರೆದಿದ್ದಾರೆ.