<p>ಭಾರತ–ಚೀನಾ ಗಡಿಯತ್ತ ಸಾಗುತ್ತಿದ್ದ ಸೇನಾ ಬೆಂಗಾವಲು ಪಡೆಗೆ ರೈತರು ತಡೆ ಒಡ್ಡಿದರೇ? ವೈರಲ್ ಆಗಿರುವ ವಿಡಿಯೊ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಸೇನಾ ಸಮವಸ್ತ್ರದಲ್ಲಿರುವ ವ್ಯಕ್ತಿಯೊಬ್ಬರು ರೈತರ ಗುಂಪಿನ ಜೊತೆ ಮಾತುಕತೆ ನಡೆಸುತ್ತಿರುವ ದೃಶ್ಯ ಇದರಲ್ಲಿದೆ. ಪ್ರತಿಭಟನೆ ನಡೆಸುತ್ತಿರುವ ರೈತರು ಸೇನಾ ಕರ್ತವ್ಯಕ್ಕೆ ಅಡ್ಡಿಪಡಿಸುವ ಮೂಲಕ ಅಪಮಾನ ಮಾಡಿದ್ದಾರೆ ಎಂದು ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ್ದಾರೆ.</p>.<p>ಈ ವಿಡಿಯೊ ಬಗ್ಗೆ ಸೇನೆಯೇ ಸ್ಪಷ್ಟೀಕರಣ ನೀಡಿದೆ. ಇದು ಸೆ. 27ರಂದು ಭಾರತ್ ಬಂದ್ನಂದು ಚಿತ್ರೀಕರಿಸಿದ ವಿಡಿಯೊ. ದೈನದಿಂದ ಕಾರ್ಯಾಚರಣೆಯ ಭಾಗವಾಗಿ, 20 ಸೇನಾ ವಾಹನಗಳು ಕಪುರ್ತಲಾದಿಂದ ಬೀರ್ ಸಾರಂಗ್ವಾಲ್ ಕಡೆಗೆ ಸಂಚರಿಸುತ್ತಿದ್ದವು. ಅಂದರೆ, ಗಡಿಯೊಳಗೇ ಪ್ರಯಾಣಿಸುತ್ತಿದ್ದವು. ಮಾರ್ಗಮಧ್ಯೆ, ‘ಜಲಂಧರ್ ಸಮೀಪ ಬೆಂಗಾವಲು ವಾಹನದಲ್ಲಿದ್ದ ಸಿಬ್ಬಂದಿ ಹಾಗೂ ರೈತರ ನಡುವೆ 20 ನಿಮಿಷ ಚರ್ಚೆ ನಡೆಯಿತು. ರೈತರು ವಿನಯಶೀಲರಾಗಿದ್ದರು ಮತ್ತು ನಿರ್ಗಮಿಸುವಾಗ ಕೈಕುಲುಕಿದರು. ಆದರೆ ಈ ದೃಶ್ಯವನ್ನು ವೈರಲ್ ವೀಡಿಯೊದಲ್ಲಿ ತೋರಿಸಲಾಗಿಲ್ಲ’ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈತರ ಪ್ರತಿಭಟನೆಗೆ ಮಸಿ ಬಳಿಯಲು ಮಾಡಿದ ಮತ್ತೊಂದು ಯತ್ನವಿದುಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾರತ–ಚೀನಾ ಗಡಿಯತ್ತ ಸಾಗುತ್ತಿದ್ದ ಸೇನಾ ಬೆಂಗಾವಲು ಪಡೆಗೆ ರೈತರು ತಡೆ ಒಡ್ಡಿದರೇ? ವೈರಲ್ ಆಗಿರುವ ವಿಡಿಯೊ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಸೇನಾ ಸಮವಸ್ತ್ರದಲ್ಲಿರುವ ವ್ಯಕ್ತಿಯೊಬ್ಬರು ರೈತರ ಗುಂಪಿನ ಜೊತೆ ಮಾತುಕತೆ ನಡೆಸುತ್ತಿರುವ ದೃಶ್ಯ ಇದರಲ್ಲಿದೆ. ಪ್ರತಿಭಟನೆ ನಡೆಸುತ್ತಿರುವ ರೈತರು ಸೇನಾ ಕರ್ತವ್ಯಕ್ಕೆ ಅಡ್ಡಿಪಡಿಸುವ ಮೂಲಕ ಅಪಮಾನ ಮಾಡಿದ್ದಾರೆ ಎಂದು ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ್ದಾರೆ.</p>.<p>ಈ ವಿಡಿಯೊ ಬಗ್ಗೆ ಸೇನೆಯೇ ಸ್ಪಷ್ಟೀಕರಣ ನೀಡಿದೆ. ಇದು ಸೆ. 27ರಂದು ಭಾರತ್ ಬಂದ್ನಂದು ಚಿತ್ರೀಕರಿಸಿದ ವಿಡಿಯೊ. ದೈನದಿಂದ ಕಾರ್ಯಾಚರಣೆಯ ಭಾಗವಾಗಿ, 20 ಸೇನಾ ವಾಹನಗಳು ಕಪುರ್ತಲಾದಿಂದ ಬೀರ್ ಸಾರಂಗ್ವಾಲ್ ಕಡೆಗೆ ಸಂಚರಿಸುತ್ತಿದ್ದವು. ಅಂದರೆ, ಗಡಿಯೊಳಗೇ ಪ್ರಯಾಣಿಸುತ್ತಿದ್ದವು. ಮಾರ್ಗಮಧ್ಯೆ, ‘ಜಲಂಧರ್ ಸಮೀಪ ಬೆಂಗಾವಲು ವಾಹನದಲ್ಲಿದ್ದ ಸಿಬ್ಬಂದಿ ಹಾಗೂ ರೈತರ ನಡುವೆ 20 ನಿಮಿಷ ಚರ್ಚೆ ನಡೆಯಿತು. ರೈತರು ವಿನಯಶೀಲರಾಗಿದ್ದರು ಮತ್ತು ನಿರ್ಗಮಿಸುವಾಗ ಕೈಕುಲುಕಿದರು. ಆದರೆ ಈ ದೃಶ್ಯವನ್ನು ವೈರಲ್ ವೀಡಿಯೊದಲ್ಲಿ ತೋರಿಸಲಾಗಿಲ್ಲ’ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈತರ ಪ್ರತಿಭಟನೆಗೆ ಮಸಿ ಬಳಿಯಲು ಮಾಡಿದ ಮತ್ತೊಂದು ಯತ್ನವಿದುಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>