‘ಇದು ತಿರುಚಲಾದ ಮಾಹಿತಿ’ ಎಂದು ಆಲ್ಟ್ ನ್ಯೂಸ್ ಫ್ಯಾಕ್ಟ್ಚೆಕ್ ಪ್ರಕಟಿಸಿದೆ. ‘ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಆದೇಶದಲ್ಲಿ, ಸರ್ಕಾರವು ತನಿಖೆಗೆ ಸಹಕಾರ ನೀಡದೇ ಇರುವ ಬಗ್ಗೆ ಯಾವುದೇ ಉಲ್ಲೇಖ ಇಲ್ಲ. ಸುಪ್ರೀಂ ಕೋರ್ಟ್ನ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿರುವ ಆದೇಶ ಪತ್ರದಲ್ಲಿ ಈ ಬಗ್ಗೆ ಉಲ್ಲೇಖ ಇಲ್ಲ. ಆದರೆ, ವಿಚಾರಣೆಯ ವೇಳೆ ಅಂದಿನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ‘ವಿಚಾರಣೆಯಲ್ಲಿ ಕೇಂದ್ರ ಸರ್ಕಾರವು ಯಾವುದೇ ಸಹಕಾರ ನೀಡಿಲ್ಲ ಎಂದು ತಾಂತ್ರಿಕ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ’ ಎಂದು ಹೇಳಿದ್ದರು. ಹಲವು ಮಾಧ್ಯಮ ಸಂಸ್ಥೆಗಳೂ ಇದೇ ರೀತಿ ವರದಿ ಮಾಡಿವೆ. ಸುದ್ದಿ ಸಂಸ್ಥೆಗಳು ಇದನ್ನು ವರದಿ ಮಾಡಿವೆ. ಹೀಗಾಗಿ ಅಮಿತ್ ಮಾಳವೀಯ ಅವರ ಟ್ವೀಟ್ ದಾರಿ ತಪ್ಪಿಸುವಂತಿದೆ’ ಎಂದು ಫ್ಯಾಕ್ಟ್ಚೆಕ್ನಲ್ಲಿ ವಿವರಿಸಲಾಗಿದೆ.