<p><strong>ನವದೆಹಲಿ:</strong> ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೋವಿಡ್ನಿಂದ ಮೃತಪಟ್ಟ ಪೌರಕಾರ್ಮಿಕ ರಾಜು ಅವರ ಮನೆಗೆ ಶುಕ್ರವಾರ ಭೇಟಿ ನೀಡಿ₹ 1 ಕೋಟಿ ಪರಿಹಾರ ಚೆಕ್ ವಿತರಿಸಿದರು.</p>.<p>ಉತ್ತರ ದೆಹಲಿಯ ಮಂಜು ಕಾ ತಿಲ್ಲಾ ಪ್ರದೇಶದಲ್ಲಿರುವ ರಾಜು ಅವರ ಮನೆಗೆ ಭೇಟಿ ನೀಡಿ, ಮೃತ ಪೌರಕಾರ್ಮಿಕನ ಕುಟುಂಬದ ಸದಸ್ಯರಿಗೆ ಪರಿಹಾರದ ಚೆಕ್ ಹಸ್ತಾಂತರಿಸಲಾಯಿತು.</p>.<p>ಕೋವಿಡ್-19 ಸೇವೆಯಲ್ಲಿದ್ದಾಗಲೇ ರಾಜು ಅವರಿಗೆ ಸೋಂಕು ತಗುಲಿತ್ತು. 'ದೆಹಲಿ ಜನರ ಸೇವೆಯಲ್ಲಿದ್ದಾಗಲೇ ರಾಜು ಮೃತಪಟ್ಟಿದ್ದಾರೆ. ಇಂಥ ಕೋವಿಡ್ ಯೋಧರ ಬಗ್ಗೆ ನಮಗೆ ಹೆಮ್ಮೆಯಿದೆ' ಎಂದು ಚೆಕ್ ಹಸ್ತಾಂತರಿಸಿದ ನಂತರ ಕೇಜ್ರಿವಾಲ್ ಹೇಳಿದರು.</p>.<p>ಕೋವಿಡ್-19 ಕಾಣಿಸಿಕೊಂಡ ನಂತರ 30ಕ್ಕೂ ಹೆಚ್ಚು ಪೌರಕಾರ್ಮಿಕರು ದೆಹಲಿಯಲ್ಲಿ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಈವರೆಗೆ ಒಟ್ಟು 4000 ಮಂದಿ ಮತ್ತು ದೇಶದಾದ್ಯಂತ ಒಟ್ಟು 50,000 ಮಂದಿ ಮೃತಪಟ್ಟಿದ್ದಾರೆ.</p>.<p>ಸೋಂಕು ಬಾರದಂತೆ ತಡೆಗಟ್ಟುವ ಸಾಧನಗಳನ್ನು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅಗತ್ಯ ಪ್ರಮಾಣದಲ್ಲಿ ನೀಡಿಲ್ಲ ಎಂದು ಪೌರ ಕಾರ್ಮಿಕರು ಹೇಳಿದ್ದಾರೆ. ರಕ್ಷಣಾ ಸಾಧನಗಳಾಗಿ ಒಂದಿಷ್ಟು ಫೇಸ್ ಮಾಸ್ಕ್ಗಳನ್ನು ಕೊಟ್ಟು ಕೈತೊಳೆದುಕೊಳ್ಳಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಮಾರ್ಗಸೂಚಿಯ ಅನ್ವಯ ಪೌರ ಕಾರ್ಮಿಕರಿಗೆ ಅಗತ್ಯ ರಕ್ಷಣಾ ಸಾಧನಗಳನ್ನು ವಿತರಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೋವಿಡ್ನಿಂದ ಮೃತಪಟ್ಟ ಪೌರಕಾರ್ಮಿಕ ರಾಜು ಅವರ ಮನೆಗೆ ಶುಕ್ರವಾರ ಭೇಟಿ ನೀಡಿ₹ 1 ಕೋಟಿ ಪರಿಹಾರ ಚೆಕ್ ವಿತರಿಸಿದರು.</p>.<p>ಉತ್ತರ ದೆಹಲಿಯ ಮಂಜು ಕಾ ತಿಲ್ಲಾ ಪ್ರದೇಶದಲ್ಲಿರುವ ರಾಜು ಅವರ ಮನೆಗೆ ಭೇಟಿ ನೀಡಿ, ಮೃತ ಪೌರಕಾರ್ಮಿಕನ ಕುಟುಂಬದ ಸದಸ್ಯರಿಗೆ ಪರಿಹಾರದ ಚೆಕ್ ಹಸ್ತಾಂತರಿಸಲಾಯಿತು.</p>.<p>ಕೋವಿಡ್-19 ಸೇವೆಯಲ್ಲಿದ್ದಾಗಲೇ ರಾಜು ಅವರಿಗೆ ಸೋಂಕು ತಗುಲಿತ್ತು. 'ದೆಹಲಿ ಜನರ ಸೇವೆಯಲ್ಲಿದ್ದಾಗಲೇ ರಾಜು ಮೃತಪಟ್ಟಿದ್ದಾರೆ. ಇಂಥ ಕೋವಿಡ್ ಯೋಧರ ಬಗ್ಗೆ ನಮಗೆ ಹೆಮ್ಮೆಯಿದೆ' ಎಂದು ಚೆಕ್ ಹಸ್ತಾಂತರಿಸಿದ ನಂತರ ಕೇಜ್ರಿವಾಲ್ ಹೇಳಿದರು.</p>.<p>ಕೋವಿಡ್-19 ಕಾಣಿಸಿಕೊಂಡ ನಂತರ 30ಕ್ಕೂ ಹೆಚ್ಚು ಪೌರಕಾರ್ಮಿಕರು ದೆಹಲಿಯಲ್ಲಿ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಈವರೆಗೆ ಒಟ್ಟು 4000 ಮಂದಿ ಮತ್ತು ದೇಶದಾದ್ಯಂತ ಒಟ್ಟು 50,000 ಮಂದಿ ಮೃತಪಟ್ಟಿದ್ದಾರೆ.</p>.<p>ಸೋಂಕು ಬಾರದಂತೆ ತಡೆಗಟ್ಟುವ ಸಾಧನಗಳನ್ನು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅಗತ್ಯ ಪ್ರಮಾಣದಲ್ಲಿ ನೀಡಿಲ್ಲ ಎಂದು ಪೌರ ಕಾರ್ಮಿಕರು ಹೇಳಿದ್ದಾರೆ. ರಕ್ಷಣಾ ಸಾಧನಗಳಾಗಿ ಒಂದಿಷ್ಟು ಫೇಸ್ ಮಾಸ್ಕ್ಗಳನ್ನು ಕೊಟ್ಟು ಕೈತೊಳೆದುಕೊಳ್ಳಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಮಾರ್ಗಸೂಚಿಯ ಅನ್ವಯ ಪೌರ ಕಾರ್ಮಿಕರಿಗೆ ಅಗತ್ಯ ರಕ್ಷಣಾ ಸಾಧನಗಳನ್ನು ವಿತರಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>