<p><strong>ಪುಣೆ:</strong> ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ಸುಮಾರು 10 ಅಡುಗೆ ಅನಿಲ ಸಿಲಿಂಡರ್ಗಳು ಸ್ಫೋಟಗೊಂಡಿದ್ದು, ಯಾವುದೇ ಜೀವ ಹಾನಿಯಾಗಿಲ್ಲ ಎಂದು ಅಗ್ನಿ ಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪುಣೆಯ ವಿಮನ್ ನಗರ ಪ್ರದೇಶದಲ್ಲಿ ಮಧ್ಯಾಹ್ನ 2.45 ರಿಂದ 3.00 ಗಂಟೆ ನಡುವೆ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.</p>.ಪುಣೆ: ಪಿಕಪ್ ವಾಹನ–ಆಟೊ ರಿಕ್ಷಾ ನಡುವೆ ಅಪಘಾತ; 8 ಮಂದಿ ಸಾವು.<p>ಸಿಲಿಂಡರ್ಗಳ ಸ್ಫೋಟಕ್ಕೆ ಕಾರಣವೇನು ಎನ್ನುವುದರ ಬಗ್ಗೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ. </p><p>ಸುಮಾರು 100 ಸಿಲಿಂಡರ್ಗಳನ್ನು ಕಟ್ಟಡ ಕಾರ್ಮಿಕರ ಗುಡಿಸಲುಗಳ ಬಳಿ ತೆರೆದ ಜಾಗದಲ್ಲಿ ಇರಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಬೆಂಕಿ ನಂದಿಸಲು ಮೂರು ಅಗ್ನಿಶಾಮಕ ವಾಹನ ಹಾಗೂ ನೀರಿನ ಟ್ಯಾಂಕರ್ಗಳನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಸ್ಥಳದಲ್ಲಿದ್ದ ಉಳಿದ ಸಿಲಿಂಡರ್ಗಳನ್ನು ತೆರವುಗೊಳಿಸಿ, ಹೆಚ್ಚಿನ ಹಾನಿ ತಡೆಯಲು ನೀರು ಸಿಂಪಡಿಸಲಾಗಿದೆ ಎಂದು ಪುಣೆ ಮುನ್ಸಿಪಲ್ ಕಾರ್ಪೊರೇಷನ್ನ ಅಗ್ನಿಶಾಮಕ ದಳದ ಮುಖ್ಯಸ್ಥ ದೇವೇಂದ್ರ ಪೊಟ್ಫೋಡೆ ತಿಳಿಸಿದ್ದಾರೆ.</p>.ಪುಣೆ ಮೇಣದ ಬತ್ತಿ ಕಾರ್ಖಾನೆ ಅಗ್ನಿ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ.<p>ಪ್ರಕರಣದಲ್ಲಿ ಯಾರಿಗೂ ಗಾಯವಾಗಿಲ್ಲ ಎಂದಿರುವ ಅವರು, ಘಟನೆ ಸಂಭವಿಸಲು ಕಾರಣ ಏನು ಎನ್ನುವುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ಸುಮಾರು 10 ಅಡುಗೆ ಅನಿಲ ಸಿಲಿಂಡರ್ಗಳು ಸ್ಫೋಟಗೊಂಡಿದ್ದು, ಯಾವುದೇ ಜೀವ ಹಾನಿಯಾಗಿಲ್ಲ ಎಂದು ಅಗ್ನಿ ಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪುಣೆಯ ವಿಮನ್ ನಗರ ಪ್ರದೇಶದಲ್ಲಿ ಮಧ್ಯಾಹ್ನ 2.45 ರಿಂದ 3.00 ಗಂಟೆ ನಡುವೆ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.</p>.ಪುಣೆ: ಪಿಕಪ್ ವಾಹನ–ಆಟೊ ರಿಕ್ಷಾ ನಡುವೆ ಅಪಘಾತ; 8 ಮಂದಿ ಸಾವು.<p>ಸಿಲಿಂಡರ್ಗಳ ಸ್ಫೋಟಕ್ಕೆ ಕಾರಣವೇನು ಎನ್ನುವುದರ ಬಗ್ಗೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ. </p><p>ಸುಮಾರು 100 ಸಿಲಿಂಡರ್ಗಳನ್ನು ಕಟ್ಟಡ ಕಾರ್ಮಿಕರ ಗುಡಿಸಲುಗಳ ಬಳಿ ತೆರೆದ ಜಾಗದಲ್ಲಿ ಇರಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಬೆಂಕಿ ನಂದಿಸಲು ಮೂರು ಅಗ್ನಿಶಾಮಕ ವಾಹನ ಹಾಗೂ ನೀರಿನ ಟ್ಯಾಂಕರ್ಗಳನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಸ್ಥಳದಲ್ಲಿದ್ದ ಉಳಿದ ಸಿಲಿಂಡರ್ಗಳನ್ನು ತೆರವುಗೊಳಿಸಿ, ಹೆಚ್ಚಿನ ಹಾನಿ ತಡೆಯಲು ನೀರು ಸಿಂಪಡಿಸಲಾಗಿದೆ ಎಂದು ಪುಣೆ ಮುನ್ಸಿಪಲ್ ಕಾರ್ಪೊರೇಷನ್ನ ಅಗ್ನಿಶಾಮಕ ದಳದ ಮುಖ್ಯಸ್ಥ ದೇವೇಂದ್ರ ಪೊಟ್ಫೋಡೆ ತಿಳಿಸಿದ್ದಾರೆ.</p>.ಪುಣೆ ಮೇಣದ ಬತ್ತಿ ಕಾರ್ಖಾನೆ ಅಗ್ನಿ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ.<p>ಪ್ರಕರಣದಲ್ಲಿ ಯಾರಿಗೂ ಗಾಯವಾಗಿಲ್ಲ ಎಂದಿರುವ ಅವರು, ಘಟನೆ ಸಂಭವಿಸಲು ಕಾರಣ ಏನು ಎನ್ನುವುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>