ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೊಲಿಜಿಯಂ ಮರು ಶಿಫಾರಸು ಮಾಡಿದ ಹೆಸರನ್ನು ಕೇಂದ್ರವು ಒಪ್ಪಿಕೊಳ್ಳಲೇಬೇಕು ಎಂಬುದು ನಿಯಮ. ‘ಎಲ್ಲ ಪ್ರಜೆಗಳಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಅಭ್ಯರ್ಥಿಯೊಬ್ಬರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರೆ ಅವರು ಸಾಂವಿಧಾನಿಕ ಹುದ್ದೆಯನ್ನು ಹೊಂದಲು ಅನರ್ಹರಾಗುವುದಿಲ್ಲ’ ಎಂದು ಮರು ಶಿಫಾರಸು ಮಾಡುವ ಸಂದರ್ಭದಲ್ಲಿ ಕೊಲಿಜಿಯಂ ಹೇಳಿತ್ತು.