<p><strong>ನಾಗಪುರ</strong>: ಪೈಲಟ್ಗೆ ಹೃದಯಾಘಾತ ಆದ ಕಾರಣ, ಬಾಂಗ್ಲಾದೇಶದ ‘ಬಿಮನ್ ಏರ್ಲೈನ್ಸ್’ನ ವಿಮಾನವೊಂದು ನಾಗಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಸುಮಾರು 11 ಗಂಟೆಗಳ ನಂತರ ತನ್ನ ಸಂಚಾರವನ್ನು ಪುನರಾರಂಭಿಸಿತು.</p>.<p>ಮಸ್ಕತ್ನಿಂದ ಢಾಕಾಗೆ 126 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಬಾಂಗ್ಲಾದೇಶ ವಿಮಾನದ ಪೈಲಟ್ಗೆ ದಾರಿ ಮಧ್ಯೆ ಹೃದಯಾಘಾತವಾಯಿತು. ಹಾಗಾಗಿ ಶುಕ್ರವಾರ ಬೆಳಿಗ್ಗೆ ಸುಮಾರು 11.40ರ ಸುಮಾರಿಗೆ ನಾಗಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.</p>.<p>ಹೃದಯಾಘಾತಕ್ಕೆ ಒಳಗಾಗಿರುವ ಪೈಲಟ್ ಪರಿಸ್ಥಿತಿ ಈಗಲೂ ಗಂಭೀರವಾಗಿದ್ದು, ಅವರು ವಿಮಾನ ನಿಲ್ದಾಣಕ್ಕೆ 10 ಕಿ.ಮೀ ದೂರವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಬಾಂಗ್ಲಾದೇಶದ ಬಿಮಾನ್ ಏರ್ಲೈನ್ಸ್ ಸಂಸ್ಥೆ ಪರ್ಯಾಯ ಸಿಬ್ಬಂದಿ ವ್ಯವಸ್ಥೆ ಮಾಡಿದ ನಂತರ, ವಿಮಾನವು ಶುಕ್ರವಾರ ರಾತ್ರಿ 10.37ಕ್ಕೆ ಪ್ರಯಾಣಿಕರೊಂದಿಗೆ ಢಾಕಾದತ್ತ ಹೊರಟಿತು ಎಂದು ನಾಗಪುರ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.</p>.<p>ಢಾಕಾದತ್ತ ಹೊರಟಿದ್ದ ವಿಮಾನ, ರಾಯಪುರ ಸಮೀಪದಲ್ಲಿದ್ದಾಗ ಪೈಲಟ್ಗೆ ಹೃದಯಾಘಾತವಾಯಿತು. ವಿಮಾನ ಸಿಬ್ಬಂದಿ ಕೋಲ್ಕತ್ತ ವಾಯು ಸಂಚಾರ ನಿಯಂತ್ರಣ ಕೇಂದ್ರವನ್ನು (ಎಟಿಸಿ) ಸಂಪರ್ಕಿಸಿದಾಗ, ಹತ್ತಿರದಲ್ಲಿರುವ ನಾಗಪುರ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲು ಸೂಚಿಸಿತು.</p>.<p>ಎಟಿಸಿ ಸೂಚನೆ ಮೇರೆಗೆ ಸಹ ಪೈಲಟ್ ನಾಗಪುರದಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಪುರ</strong>: ಪೈಲಟ್ಗೆ ಹೃದಯಾಘಾತ ಆದ ಕಾರಣ, ಬಾಂಗ್ಲಾದೇಶದ ‘ಬಿಮನ್ ಏರ್ಲೈನ್ಸ್’ನ ವಿಮಾನವೊಂದು ನಾಗಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಸುಮಾರು 11 ಗಂಟೆಗಳ ನಂತರ ತನ್ನ ಸಂಚಾರವನ್ನು ಪುನರಾರಂಭಿಸಿತು.</p>.<p>ಮಸ್ಕತ್ನಿಂದ ಢಾಕಾಗೆ 126 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಬಾಂಗ್ಲಾದೇಶ ವಿಮಾನದ ಪೈಲಟ್ಗೆ ದಾರಿ ಮಧ್ಯೆ ಹೃದಯಾಘಾತವಾಯಿತು. ಹಾಗಾಗಿ ಶುಕ್ರವಾರ ಬೆಳಿಗ್ಗೆ ಸುಮಾರು 11.40ರ ಸುಮಾರಿಗೆ ನಾಗಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.</p>.<p>ಹೃದಯಾಘಾತಕ್ಕೆ ಒಳಗಾಗಿರುವ ಪೈಲಟ್ ಪರಿಸ್ಥಿತಿ ಈಗಲೂ ಗಂಭೀರವಾಗಿದ್ದು, ಅವರು ವಿಮಾನ ನಿಲ್ದಾಣಕ್ಕೆ 10 ಕಿ.ಮೀ ದೂರವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಬಾಂಗ್ಲಾದೇಶದ ಬಿಮಾನ್ ಏರ್ಲೈನ್ಸ್ ಸಂಸ್ಥೆ ಪರ್ಯಾಯ ಸಿಬ್ಬಂದಿ ವ್ಯವಸ್ಥೆ ಮಾಡಿದ ನಂತರ, ವಿಮಾನವು ಶುಕ್ರವಾರ ರಾತ್ರಿ 10.37ಕ್ಕೆ ಪ್ರಯಾಣಿಕರೊಂದಿಗೆ ಢಾಕಾದತ್ತ ಹೊರಟಿತು ಎಂದು ನಾಗಪುರ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.</p>.<p>ಢಾಕಾದತ್ತ ಹೊರಟಿದ್ದ ವಿಮಾನ, ರಾಯಪುರ ಸಮೀಪದಲ್ಲಿದ್ದಾಗ ಪೈಲಟ್ಗೆ ಹೃದಯಾಘಾತವಾಯಿತು. ವಿಮಾನ ಸಿಬ್ಬಂದಿ ಕೋಲ್ಕತ್ತ ವಾಯು ಸಂಚಾರ ನಿಯಂತ್ರಣ ಕೇಂದ್ರವನ್ನು (ಎಟಿಸಿ) ಸಂಪರ್ಕಿಸಿದಾಗ, ಹತ್ತಿರದಲ್ಲಿರುವ ನಾಗಪುರ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲು ಸೂಚಿಸಿತು.</p>.<p>ಎಟಿಸಿ ಸೂಚನೆ ಮೇರೆಗೆ ಸಹ ಪೈಲಟ್ ನಾಗಪುರದಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>