<p><strong>ನವದೆಹಲಿ:</strong> ಕೇರಳ ಮತ್ತು ಬಿಹಾರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 11 ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.</p><p>ಕೇರಳದ ಕಣ್ಣೂರು ಸಮೀಪ ಸೋಮವಾರ ರಾತ್ರಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ಗ್ಯಾಸ್ ಸಿಲಿಂಡರ್ಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. </p><p>ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಅಮಾಪುರ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. </p><p>ಕಲ್ಲಿನ ಜಲ್ಲಿ ತುಂಬಿದ್ದ ಟ್ರಕ್ ನಿಯಂತ್ರಣ ಕಳೆದುಕೊಂಡು ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬಾಲಕರು ಸರಿದಂತೆ 6 ಜನರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ.</p><p>ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇರಳ ಮತ್ತು ಬಿಹಾರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 11 ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.</p><p>ಕೇರಳದ ಕಣ್ಣೂರು ಸಮೀಪ ಸೋಮವಾರ ರಾತ್ರಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ಗ್ಯಾಸ್ ಸಿಲಿಂಡರ್ಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. </p><p>ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಅಮಾಪುರ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. </p><p>ಕಲ್ಲಿನ ಜಲ್ಲಿ ತುಂಬಿದ್ದ ಟ್ರಕ್ ನಿಯಂತ್ರಣ ಕಳೆದುಕೊಂಡು ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬಾಲಕರು ಸರಿದಂತೆ 6 ಜನರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ.</p><p>ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>