<p class="title"><strong>ನವದೆಹಲಿ</strong>: ದೇಶದಲ್ಲಿನ ಒಟ್ಟು ಕೋವಿಡ್–19 ಪ್ರಕರಣಗಳಲ್ಲಿ ಸುಮಾರು ಶೇ 11ರಷ್ಟು ಜನರು 20 ವರ್ಷ ವಯಸ್ಸಿಗಿಂತ ಕಡಿಮೆ ವಯೋಮಾನದರು ಎಂದು ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಅವರು ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.</p>.<p>2021ರ ಜುಲೈವರೆಗೆ 18 ವರ್ಷ ವಯೋಮಾನದೊಳಗಿನ ಎಷ್ಟು ಮಕ್ಕಳು ಕೊರೊನಾ ಸೋಂಕಿಗೀಡಾಗಿದ್ದಾರೆ ಎನ್ನುವ ಕುರಿತು ಕೇಳಲಾದ ಪ್ರಶ್ನೆಗೆ ಅವರು ಮಾಹಿತಿ ನೀಡಿದರು.</p>.<p class="bodytext">‘ಮಕ್ಕಳಿಗಾಗಿ ಕೋವಿಡ್ ಲಸಿಕೆ ತಯಾರಿಸುವ ಪ್ರಕ್ರಿಯೆಯು ಪ್ರಾಯೋಗಿಕ ಹಂತದಲ್ಲಿದೆ. ಈ ನಿಟ್ಟಿನಲ್ಲಿಕ್ಲಿನಿಕಲ್ ಪ್ರಯೋಗ ನಡೆಸಲು ಹೈದರಾಬಾದ್ನ ಭಾರತ್ ಬಯೊಟೆಕ್ ಮತ್ತು ಅಹಮದಾಬಾದ್ನ ಕ್ಯಾಡಿಲಾ ಹೆಲ್ತ್ಕೇರ್ ಲಿಮಿಟೆಡ್ಗೆ ಅನುಮತಿ ನೀಡಲಾಗಿದೆ’ ಎಂದೂ ಅವರು ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.</p>.<p class="bodytext"><strong>ಕೋವಿಡ್: 2,903 ರೈಲ್ವೆ ಉದ್ಯೋಗಿಗಳ ಮರಣ</strong><br />ಕೋವಿಡ್–19ನಿಂದಾಗಿ ರೈಲ್ವೆ ಇಲಾಖೆಯ ಒಟ್ಟು 2,903 ನೌಕರರು ಸಾವಿಗೀಡಾಗಿದ್ದಾರೆ ಎಂದು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ಶುಕ್ರವಾರ ರಾಜ್ಯಸಭೆಗೆ ಮಾಹಿತಿ ನೀಡಿದರು.</p>.<p>ಮೃತರಲ್ಲಿ ಇದುವರೆಗೆ 2,782 ನೌಕರರ ಕುಟುಂಬಗಳಿಗೆ ತಲುಪಬೇಕಾದ ಬಾಕಿ ಹಣವನ್ನು ನೀಡಲಾಗಿದೆ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ದೇಶದಲ್ಲಿನ ಒಟ್ಟು ಕೋವಿಡ್–19 ಪ್ರಕರಣಗಳಲ್ಲಿ ಸುಮಾರು ಶೇ 11ರಷ್ಟು ಜನರು 20 ವರ್ಷ ವಯಸ್ಸಿಗಿಂತ ಕಡಿಮೆ ವಯೋಮಾನದರು ಎಂದು ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಅವರು ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.</p>.<p>2021ರ ಜುಲೈವರೆಗೆ 18 ವರ್ಷ ವಯೋಮಾನದೊಳಗಿನ ಎಷ್ಟು ಮಕ್ಕಳು ಕೊರೊನಾ ಸೋಂಕಿಗೀಡಾಗಿದ್ದಾರೆ ಎನ್ನುವ ಕುರಿತು ಕೇಳಲಾದ ಪ್ರಶ್ನೆಗೆ ಅವರು ಮಾಹಿತಿ ನೀಡಿದರು.</p>.<p class="bodytext">‘ಮಕ್ಕಳಿಗಾಗಿ ಕೋವಿಡ್ ಲಸಿಕೆ ತಯಾರಿಸುವ ಪ್ರಕ್ರಿಯೆಯು ಪ್ರಾಯೋಗಿಕ ಹಂತದಲ್ಲಿದೆ. ಈ ನಿಟ್ಟಿನಲ್ಲಿಕ್ಲಿನಿಕಲ್ ಪ್ರಯೋಗ ನಡೆಸಲು ಹೈದರಾಬಾದ್ನ ಭಾರತ್ ಬಯೊಟೆಕ್ ಮತ್ತು ಅಹಮದಾಬಾದ್ನ ಕ್ಯಾಡಿಲಾ ಹೆಲ್ತ್ಕೇರ್ ಲಿಮಿಟೆಡ್ಗೆ ಅನುಮತಿ ನೀಡಲಾಗಿದೆ’ ಎಂದೂ ಅವರು ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.</p>.<p class="bodytext"><strong>ಕೋವಿಡ್: 2,903 ರೈಲ್ವೆ ಉದ್ಯೋಗಿಗಳ ಮರಣ</strong><br />ಕೋವಿಡ್–19ನಿಂದಾಗಿ ರೈಲ್ವೆ ಇಲಾಖೆಯ ಒಟ್ಟು 2,903 ನೌಕರರು ಸಾವಿಗೀಡಾಗಿದ್ದಾರೆ ಎಂದು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ಶುಕ್ರವಾರ ರಾಜ್ಯಸಭೆಗೆ ಮಾಹಿತಿ ನೀಡಿದರು.</p>.<p>ಮೃತರಲ್ಲಿ ಇದುವರೆಗೆ 2,782 ನೌಕರರ ಕುಟುಂಬಗಳಿಗೆ ತಲುಪಬೇಕಾದ ಬಾಕಿ ಹಣವನ್ನು ನೀಡಲಾಗಿದೆ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>