<p><strong>ಮುಂಬೈ: </strong>ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಭಾಸ್ಕರ್ ಜಾಧವ್ ಅವರ ಜೊತೆಗೆ ಅವರ ಕಚೇರಿಯಲ್ಲಿಯೇ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಿಜೆಪಿಯ 12 ಶಾಸಕರನ್ನು ಒಂದು ವರ್ಷದ ಅವಧಿಗೆ ವಿಧಾನಸಭೆಯಿಂದ ಅಮಾನತುಪಡಿಸಲಾಗಿದೆ.</p>.<p>12 ಶಾಸಕರನ್ನು ಸದನದಿಂದ ಅಮಾನತುಪಡಿಸಬೇಕು ಎಂಬ ನಿಲುವಳಿಯನ್ನು ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಮಂಡಿಸಿದ್ದು, ಸದನ ಇದನ್ನು ಧ್ವನಿಮತದಿಂದ ಅಂಗೀಕರಿಸಿತು.</p>.<p>ಸಂಜಯ್ ಕುಟೆ, ಆಶೀಷ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲ್ವಾಣಿ, ಹರೀಶ್ ಪಿಂಪಾಲೆ, ಯೋಗೇಶ್ ಸಾಗರ್, ಜಯ್ ಕುಮಾರ್ ರಾವತ್, ನಾರಾಯಣ್ ಕುಚೆ, ರಾಮ್ ಸತ್ಪುಟೆ ಮತ್ತು ಬಂಟಿ ಬಾಂಗ್ಡಿಯಾ ಅಮಾನತುಗೊಂಡ ಶಾಸಕರು.</p>.<p>ಅಮಾನತು ಅವಧಿಯಲ್ಲಿ ಈ ಶಾಸಕರಿಗೆ ಮುಂಬೈ, ನಾಗಪುರದಲ್ಲಿರುವ ಸಚಿವಾಲಯದ ಅವರಣಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಪರಬ್ ತಿಳಿಸಿದರು. ಅಮಾನತು ಕ್ರಮಕ್ಕೆ ಆಕ್ಷೇಪಿಸಿದ ಬಿಜೆಪಿ ಶಾಸಕರು ಮುಖಂಡ ದೇವೇಂದ್ರ ಫಡಣವೀಸ್ ನೇತೃತ್ವದಲ್ಲಿ ಕಲಾಪ ಬಹಿಷ್ಕರಿಸಲಾಗುವುದು ಎಂದು ಪ್ರಕಟಿಸಿದರು.</p>.<p>‘ಇವು ಸುಳ್ಳು ಆರೋಪಗಳು. ಬಿಜೆಪಿಯ ಯಾವ ಶಾಸಕರು ನಿಂದನೆ ಮಾಡಿಲ್ಲ. ಶಿವಸೇನೆಯ ಶಾಸಕರು ಅವಾಚ್ಯ ಪದ ಬಳಸಿದ್ದಾರೆ. ಬಿಜೆಪಿ ಶಾಸಕ ಆಶೀಷ್ ಶೆಲಾರ್ ಕ್ಷಮೆಯಾಚಿಸಿದ್ದಾರೆ. ವಿಷಯ ಇಲ್ಲಿಗೆ ಮುಗಿದಿದೆ. ಜಾಧವ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ’ ಎಂದು ದೇವೇಂದ್ರ ಫಡಣವೀಸ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಭಾಸ್ಕರ್ ಜಾಧವ್ ಅವರ ಜೊತೆಗೆ ಅವರ ಕಚೇರಿಯಲ್ಲಿಯೇ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಿಜೆಪಿಯ 12 ಶಾಸಕರನ್ನು ಒಂದು ವರ್ಷದ ಅವಧಿಗೆ ವಿಧಾನಸಭೆಯಿಂದ ಅಮಾನತುಪಡಿಸಲಾಗಿದೆ.</p>.<p>12 ಶಾಸಕರನ್ನು ಸದನದಿಂದ ಅಮಾನತುಪಡಿಸಬೇಕು ಎಂಬ ನಿಲುವಳಿಯನ್ನು ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಮಂಡಿಸಿದ್ದು, ಸದನ ಇದನ್ನು ಧ್ವನಿಮತದಿಂದ ಅಂಗೀಕರಿಸಿತು.</p>.<p>ಸಂಜಯ್ ಕುಟೆ, ಆಶೀಷ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲ್ವಾಣಿ, ಹರೀಶ್ ಪಿಂಪಾಲೆ, ಯೋಗೇಶ್ ಸಾಗರ್, ಜಯ್ ಕುಮಾರ್ ರಾವತ್, ನಾರಾಯಣ್ ಕುಚೆ, ರಾಮ್ ಸತ್ಪುಟೆ ಮತ್ತು ಬಂಟಿ ಬಾಂಗ್ಡಿಯಾ ಅಮಾನತುಗೊಂಡ ಶಾಸಕರು.</p>.<p>ಅಮಾನತು ಅವಧಿಯಲ್ಲಿ ಈ ಶಾಸಕರಿಗೆ ಮುಂಬೈ, ನಾಗಪುರದಲ್ಲಿರುವ ಸಚಿವಾಲಯದ ಅವರಣಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಪರಬ್ ತಿಳಿಸಿದರು. ಅಮಾನತು ಕ್ರಮಕ್ಕೆ ಆಕ್ಷೇಪಿಸಿದ ಬಿಜೆಪಿ ಶಾಸಕರು ಮುಖಂಡ ದೇವೇಂದ್ರ ಫಡಣವೀಸ್ ನೇತೃತ್ವದಲ್ಲಿ ಕಲಾಪ ಬಹಿಷ್ಕರಿಸಲಾಗುವುದು ಎಂದು ಪ್ರಕಟಿಸಿದರು.</p>.<p>‘ಇವು ಸುಳ್ಳು ಆರೋಪಗಳು. ಬಿಜೆಪಿಯ ಯಾವ ಶಾಸಕರು ನಿಂದನೆ ಮಾಡಿಲ್ಲ. ಶಿವಸೇನೆಯ ಶಾಸಕರು ಅವಾಚ್ಯ ಪದ ಬಳಸಿದ್ದಾರೆ. ಬಿಜೆಪಿ ಶಾಸಕ ಆಶೀಷ್ ಶೆಲಾರ್ ಕ್ಷಮೆಯಾಚಿಸಿದ್ದಾರೆ. ವಿಷಯ ಇಲ್ಲಿಗೆ ಮುಗಿದಿದೆ. ಜಾಧವ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ’ ಎಂದು ದೇವೇಂದ್ರ ಫಡಣವೀಸ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>