ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಶಿಕ್ಷಣ ಕಾರ್ಯದರ್ಶಿ ಅನಿಲ್ ಸ್ವರೂಪ್, 10ನೇ ತರಗತಿಯ ಗಣಿತ ಪರೀಕ್ಷೆಯ ಮರು ಪರೀಕ್ಷೆ ಅಗತ್ಯವಿದೆಯೋ ಇಲ್ಲವೋ ಎಂಬುದನ್ನು ತೀರ್ಮಾನಿಸಲಾಗುವುದು. ಅಗತ್ಯವಿದೆ ಎಂದಾದರೆ ಆ ಪರೀಕ್ಷೆ ಜುಲೈ ತಿಂಗಳಲ್ಲಿ ನಡೆಸಲಾಗುವುದು. ಗಣಿತ ಪರೀಕ್ಷೆ ದೆಹಲಿ ಮತ್ತು ಹರಿಯಾಣದಲ್ಲಿ ಮಾತ್ರ ನಡೆಯಲಿದೆ. ಅಂದರೆ ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಇರುವುದಿಲ್ಲ.