<p><strong>ನವದೆಹಲಿ:</strong> ಆರ್ಎಸ್ಪಿ ಸಂಸದ ಎನ್.ಕೆ.ಪ್ರೇಮಚಂದ್ರನ್ ಅವರು ನೀಟ್ಗೆ ಸಂಬಂಧಿಸಿದಂತೆ ಮುಂದಿಟ್ಟಿರುವ ತಿದ್ದುಪಡಿಯು ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮೊದಲನೆಯದಾಗಿ ಚರ್ಚೆಗೆ ಬರಲಿದೆ. </p>.<p>ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ), ನೀಟ್ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ತಿದ್ದುಪಡಿಗಳನ್ನು ವಿರೋಧ ಪಕ್ಷಗಳ ಸಂಸದರು ಸಲ್ಲಿಸಿದ್ದಾರೆ. ಇದರಲ್ಲಿ 9 ತಿದ್ದುಪಡಿಗಳು ಲೋಕಸಭೆಯಲ್ಲಿ ಚರ್ಚೆಗೆ ಬರಲಿವೆ. ಸಂಸದರಾದ ಕೆ.ಸಿ.ವೇಣುಗೋಪಾಲ್, ಗೌರವ್ ಗೊಗೊಯ್, ಡಿ.ವೈಕೊ, ಶಾಫಿ ಪರಂಬಿಲ್ ಮತ್ತು ಜಾನ್ ಬ್ರಿಟ್ಟಾಸ್ ಅವರು ತಿದ್ದುಪಡಿಗಳನ್ನು ಸಲ್ಲಿಸಿದವರಲ್ಲಿ ಸೇರಿದ್ದಾರೆ.</p>.<p>ಒಟ್ಟಾರೆಯಾಗಿ 50 ಸಂಸದರು 323 ತಿದ್ದುಪಡಿಗಳನ್ನು (ಲೋಕಸಭೆಯಲ್ಲಿ 215 ಮತ್ತು ರಾಜ್ಯಸಭೆಯಲ್ಲಿ 108) ಸಲ್ಲಿಸಿದ್ದಾರೆ. ಬೆಲೆಯೇರಿಕೆ, ನಿರುದ್ಯೋಗ, ಕೇಂದ್ರ ಸರ್ಕಾರದ ಖಾಲಿ ಹುದ್ದೆಗಳ ಭರ್ತಿ, ಖಾಸಗಿ ವಲಯದ ಕೋಟಾ, ರೈತರ ಸಮಸ್ಯೆಗಳು ಮತ್ತು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ತಿದ್ದುಪಡಿಗಳು ಇದರಲ್ಲಿ ಸೇರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆರ್ಎಸ್ಪಿ ಸಂಸದ ಎನ್.ಕೆ.ಪ್ರೇಮಚಂದ್ರನ್ ಅವರು ನೀಟ್ಗೆ ಸಂಬಂಧಿಸಿದಂತೆ ಮುಂದಿಟ್ಟಿರುವ ತಿದ್ದುಪಡಿಯು ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮೊದಲನೆಯದಾಗಿ ಚರ್ಚೆಗೆ ಬರಲಿದೆ. </p>.<p>ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ), ನೀಟ್ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ತಿದ್ದುಪಡಿಗಳನ್ನು ವಿರೋಧ ಪಕ್ಷಗಳ ಸಂಸದರು ಸಲ್ಲಿಸಿದ್ದಾರೆ. ಇದರಲ್ಲಿ 9 ತಿದ್ದುಪಡಿಗಳು ಲೋಕಸಭೆಯಲ್ಲಿ ಚರ್ಚೆಗೆ ಬರಲಿವೆ. ಸಂಸದರಾದ ಕೆ.ಸಿ.ವೇಣುಗೋಪಾಲ್, ಗೌರವ್ ಗೊಗೊಯ್, ಡಿ.ವೈಕೊ, ಶಾಫಿ ಪರಂಬಿಲ್ ಮತ್ತು ಜಾನ್ ಬ್ರಿಟ್ಟಾಸ್ ಅವರು ತಿದ್ದುಪಡಿಗಳನ್ನು ಸಲ್ಲಿಸಿದವರಲ್ಲಿ ಸೇರಿದ್ದಾರೆ.</p>.<p>ಒಟ್ಟಾರೆಯಾಗಿ 50 ಸಂಸದರು 323 ತಿದ್ದುಪಡಿಗಳನ್ನು (ಲೋಕಸಭೆಯಲ್ಲಿ 215 ಮತ್ತು ರಾಜ್ಯಸಭೆಯಲ್ಲಿ 108) ಸಲ್ಲಿಸಿದ್ದಾರೆ. ಬೆಲೆಯೇರಿಕೆ, ನಿರುದ್ಯೋಗ, ಕೇಂದ್ರ ಸರ್ಕಾರದ ಖಾಲಿ ಹುದ್ದೆಗಳ ಭರ್ತಿ, ಖಾಸಗಿ ವಲಯದ ಕೋಟಾ, ರೈತರ ಸಮಸ್ಯೆಗಳು ಮತ್ತು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ತಿದ್ದುಪಡಿಗಳು ಇದರಲ್ಲಿ ಸೇರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>