<p><strong>ನವದೆಹಲಿ</strong>: ಕಳೆದ ಹತ್ತು ದಿನಗಳಲ್ಲಿ ಯಮುನಾ ನದಿ ಒಡಲಿನಿಂದ 1,300 ಟನ್ ತ್ಯಾಜ್ಯವನ್ನು ಹೊರ ತೆಗೆಯಲಾಗಿದೆ ಎಂದು ನೀರಾವರಿ ಹಾಗೂ ನೆರೆ ನಿಯಂತ್ರಣ ಸಚಿವ ಪರ್ವೇಶ್ ವರ್ಮಾ ತಿಳಿಸಿದ್ದಾರೆ.</p><p>ಇಂದು (ಬುಧವಾರ) ದೋಣಿ ಮೂಲಕ ಯಮುನಾ ನದಿ ಪರಿಶೀಲಿಸಿದ ವರ್ಮಾ, ನದಿಯನ್ನು ಸಂಪೂರ್ಣವಾಗಿ ಶುಚಿಗೊಳಿಸುವುದೇ ನಮ್ಮ ಬದ್ಧತೆಯಾಗಿದೆ ಎಂದಿದ್ದಾರೆ.</p><p>‘2023ರಲ್ಲಿ ದೆಹಲಿ ಭೀಕರ ಪ್ರವಾಹವನ್ನು ಎದುರಿಸಿತ್ತು. ಈ ಹಿಂದೆ ಎಲ್ಲಾ ಫ್ಲಡ್ಗೇಟ್ಗಳನ್ನು ಮುಚ್ಚಲಾಗಿತ್ತು. ಈಗ ಅವುಗಳನ್ನು ದುರಸ್ಥಿ ಪಡಿಸಲಾಗಿದ್ದು, ಭವಿಷ್ಯದಲ್ಲಿ ಪ್ರವಾಹವನ್ನು ತಡೆಗಟ್ಟುವ ಸಾಮರ್ಥ್ಯ ಹೊಂದಿವೆ’ ಎಂದರು.</p><p>‘ಕಳೆದ 10 ದಿನಗಳಲ್ಲಿ 1,300 ಮೆಟ್ರಿಕ್ ಟನ್ಗಳಷ್ಟು ತ್ಯಾಜ್ಯವನ್ನು ನದಿಯ ಒಡಲಿನಿಂದ ತೆಗೆಯಲಾಗಿದೆ. ದೆಹಲಿ ಅಭಿವೃದ್ಧಿ ಪ್ರಾಧಿಕಾರವು ನದಿಪಾತ್ರವನ್ನು ಶುಚಿಗೊಳಿಸುವುದರ ಜೊತೆಗೆ ಅತಿಕ್ರಮಗಳನ್ನು ತೆರವುಗೊಳಿಸುತ್ತಿದೆ’ ಎಂದರು.</p><p>ನದಿಗೆ ತ್ಯಾಜ್ಯವನ್ನು ಬಿಡುವ 18 ಪ್ರಮುಖ ಚರಂಡಿಗಳಿಗೆ ‘ಒಳಚರಂಡಿ ಸಂಸ್ಕರಣಾ ಘಟಕ’ಗಳನ್ನು (ಎಸ್ಟಿಪಿ) ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.</p><p>ಇದೇ ವೇಳೆ ಹಿಂದಿನ ಎಎಪಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ‘ಹಿಂದಿನ ಸರ್ಕಾರಕ್ಕೆ ಯಮುನಾ ನದಿ ಶುಚಿಗೊಳಿಸುವ ಬಗ್ಗೆ ಯಾವ ಆಸಕ್ತಿಯೂ ಇರಲಿಲ್ಲ. ಆದರೆ, ಈಗ ದೆಹಲಿ ಸರ್ಕಾರವಲ್ಲದೇ ಕೇಂದ್ರ ಸರ್ಕಾರವೂ ಈ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಳೆದ ಹತ್ತು ದಿನಗಳಲ್ಲಿ ಯಮುನಾ ನದಿ ಒಡಲಿನಿಂದ 1,300 ಟನ್ ತ್ಯಾಜ್ಯವನ್ನು ಹೊರ ತೆಗೆಯಲಾಗಿದೆ ಎಂದು ನೀರಾವರಿ ಹಾಗೂ ನೆರೆ ನಿಯಂತ್ರಣ ಸಚಿವ ಪರ್ವೇಶ್ ವರ್ಮಾ ತಿಳಿಸಿದ್ದಾರೆ.</p><p>ಇಂದು (ಬುಧವಾರ) ದೋಣಿ ಮೂಲಕ ಯಮುನಾ ನದಿ ಪರಿಶೀಲಿಸಿದ ವರ್ಮಾ, ನದಿಯನ್ನು ಸಂಪೂರ್ಣವಾಗಿ ಶುಚಿಗೊಳಿಸುವುದೇ ನಮ್ಮ ಬದ್ಧತೆಯಾಗಿದೆ ಎಂದಿದ್ದಾರೆ.</p><p>‘2023ರಲ್ಲಿ ದೆಹಲಿ ಭೀಕರ ಪ್ರವಾಹವನ್ನು ಎದುರಿಸಿತ್ತು. ಈ ಹಿಂದೆ ಎಲ್ಲಾ ಫ್ಲಡ್ಗೇಟ್ಗಳನ್ನು ಮುಚ್ಚಲಾಗಿತ್ತು. ಈಗ ಅವುಗಳನ್ನು ದುರಸ್ಥಿ ಪಡಿಸಲಾಗಿದ್ದು, ಭವಿಷ್ಯದಲ್ಲಿ ಪ್ರವಾಹವನ್ನು ತಡೆಗಟ್ಟುವ ಸಾಮರ್ಥ್ಯ ಹೊಂದಿವೆ’ ಎಂದರು.</p><p>‘ಕಳೆದ 10 ದಿನಗಳಲ್ಲಿ 1,300 ಮೆಟ್ರಿಕ್ ಟನ್ಗಳಷ್ಟು ತ್ಯಾಜ್ಯವನ್ನು ನದಿಯ ಒಡಲಿನಿಂದ ತೆಗೆಯಲಾಗಿದೆ. ದೆಹಲಿ ಅಭಿವೃದ್ಧಿ ಪ್ರಾಧಿಕಾರವು ನದಿಪಾತ್ರವನ್ನು ಶುಚಿಗೊಳಿಸುವುದರ ಜೊತೆಗೆ ಅತಿಕ್ರಮಗಳನ್ನು ತೆರವುಗೊಳಿಸುತ್ತಿದೆ’ ಎಂದರು.</p><p>ನದಿಗೆ ತ್ಯಾಜ್ಯವನ್ನು ಬಿಡುವ 18 ಪ್ರಮುಖ ಚರಂಡಿಗಳಿಗೆ ‘ಒಳಚರಂಡಿ ಸಂಸ್ಕರಣಾ ಘಟಕ’ಗಳನ್ನು (ಎಸ್ಟಿಪಿ) ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.</p><p>ಇದೇ ವೇಳೆ ಹಿಂದಿನ ಎಎಪಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ‘ಹಿಂದಿನ ಸರ್ಕಾರಕ್ಕೆ ಯಮುನಾ ನದಿ ಶುಚಿಗೊಳಿಸುವ ಬಗ್ಗೆ ಯಾವ ಆಸಕ್ತಿಯೂ ಇರಲಿಲ್ಲ. ಆದರೆ, ಈಗ ದೆಹಲಿ ಸರ್ಕಾರವಲ್ಲದೇ ಕೇಂದ್ರ ಸರ್ಕಾರವೂ ಈ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>