ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ರೈಲಿಗೆ ಬೆಂಕಿಯಿಟ್ಟ ಆರೋಪಿ ಶಾರುಖ್ ಸೈಫಿಗೆ 14 ದಿನಗಳ ನ್ಯಾಯಾಂಗ ಬಂಧನ

Last Updated 7 ಏಪ್ರಿಲ್ 2023, 8:41 IST
ಅಕ್ಷರ ಗಾತ್ರ

ತಿರುವನಂತಪುರ: ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿ ಶಾರುಖ್‌ ಸೈಫಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಆರೋಪಿ ಸೈಫಿ(24) ಗಾಯಗೊಂಡಿರುವುದರ ಜತೆಗೆ ಆತನ ಬಿಲಿರುಬಿನ್ ಮಟ್ಟಗಳು ಹೆಚ್ಚಾಗಿದ್ದರಿಂದ ಗುರುವಾರ ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಿಗ್ಗೆ ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಸೈಫಿಗೆ ನ್ಯಾಯಾಂಗ ಬಂಧನ ವಿಧಿಸಿದರು.

ನಂತರ, ವೈದ್ಯಕೀಯ ಮಂಡಳಿಯು ಸಭೆ ಸೇರಿ ಆರೋಪಿಯ ಆರೋಗ್ಯ ಸ್ಥಿತಿಯನ್ನು ನಿರ್ಣಯಿಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ನಿರ್ಧರಿಸಿತು. ಆತನನ್ನು ಯಾವ ಜೈಲಿಗೆ ಕೊಂಡೊಯ್ಯಬೇಕು ಎಂಬುದನ್ನು ಪೊಲೀಸರು ಇನ್ನಷ್ಟೇ ನಿರ್ಧರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT