<p><strong>ನವದೆಹಲಿ</strong>: ಜನವರಿ 26ರಂದು ಗಣರಾಜ್ಯೋತ್ಸವದ ಪರೇಡ್ ನಡೆಯಲಿರುವ ಕರ್ತವ್ಯ ಪಥದಲ್ಲಿ ಭದ್ರತೆಗಾಗಿ 14,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p><p> 77,000 ಆಹ್ವಾನಿತರ ಸುರಕ್ಷತೆ ದೃಷ್ಟಿಯಿಂದ ವ್ಯಾಪಕ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ದೆಹಲಿ ಪೊಲೀಸ್ನ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭದ್ರತೆಯ ಹೊಣೆ ಹೊತ್ತಿರುವ ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್, ವೃತ್ತಿ ಪರ, ದೃಢ ಮತ್ತು ದೋಷರಹಿತ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.</p><p>ಸೋಮವಾರ ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಸಂದರ್ಭ ದೆಹಲಿಯ ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಕಾಪಾಡಲಾಗಿದೆ. ನೆರೆ ರಾಜ್ಯಗಳ ನೆರವಿನೊಂದಿಗೆ ಗಡಿಯಲ್ಲಿ ಶಾಂತಿಪಾಲನೆ ಆಗಿದೆ ಎಂದು ಅವರು ಹೇಳಿದರು.</p><p>‘ಭದ್ರತೆಯ ದೃಷ್ಟಿಯಿಂದ ನವದೆಹಲಿ ಜಿಲ್ಲೆಯನ್ನು 28 ವಲಯಗಳನ್ನಾಗಿ ವಿಂಗಡಿಸಲಾಗಿದೆ. ಈ ವಲಯಗಳ ಹೊಣೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದೆ’ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಹೊಣೆ ಹೊತ್ತಿರುವ ವಿಶೇಷ ಪೊಲೀಸ್ ಆಯುಕ್ತ ಮಧುಪ್ ತಿವಾರಿ ಹೇಳಿದ್ದಾರೆ.</p><p>ಹೆಲ್ಪ್ ಡೆಸ್ಕ್, ಪ್ರಥಮ ಚಿಕಿತ್ಸೆ ಕಿಯಾಸ್ಕ್, ಅತಿಥಿಗಳಿಗಾಗಿ ವಿಶ್ರಾಂತಿ ಕೇಂದ್ರ, ಕಾಣೆಯಾದವರ ಬಗ್ಗೆ ಮಾಹಿತಿ ನೀಡಲು ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.</p><p>ಸಮಯಕ್ಕೆ ಸರಿಯಾಗಿ ಪರೇಡ್ ಸ್ಥಳಕ್ಕೆ ಆಗಮಿಸಿ, ಭದ್ರತಾ ಸಿಬ್ಬಂದಿ ಜೊತೆ ಸಹಕರಿಸುವಂತೆ ತಿವಾರಿ ಮನವಿ ಮಾಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜನವರಿ 26ರಂದು ಗಣರಾಜ್ಯೋತ್ಸವದ ಪರೇಡ್ ನಡೆಯಲಿರುವ ಕರ್ತವ್ಯ ಪಥದಲ್ಲಿ ಭದ್ರತೆಗಾಗಿ 14,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p><p> 77,000 ಆಹ್ವಾನಿತರ ಸುರಕ್ಷತೆ ದೃಷ್ಟಿಯಿಂದ ವ್ಯಾಪಕ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ದೆಹಲಿ ಪೊಲೀಸ್ನ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭದ್ರತೆಯ ಹೊಣೆ ಹೊತ್ತಿರುವ ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್, ವೃತ್ತಿ ಪರ, ದೃಢ ಮತ್ತು ದೋಷರಹಿತ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.</p><p>ಸೋಮವಾರ ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಸಂದರ್ಭ ದೆಹಲಿಯ ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಕಾಪಾಡಲಾಗಿದೆ. ನೆರೆ ರಾಜ್ಯಗಳ ನೆರವಿನೊಂದಿಗೆ ಗಡಿಯಲ್ಲಿ ಶಾಂತಿಪಾಲನೆ ಆಗಿದೆ ಎಂದು ಅವರು ಹೇಳಿದರು.</p><p>‘ಭದ್ರತೆಯ ದೃಷ್ಟಿಯಿಂದ ನವದೆಹಲಿ ಜಿಲ್ಲೆಯನ್ನು 28 ವಲಯಗಳನ್ನಾಗಿ ವಿಂಗಡಿಸಲಾಗಿದೆ. ಈ ವಲಯಗಳ ಹೊಣೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದೆ’ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಹೊಣೆ ಹೊತ್ತಿರುವ ವಿಶೇಷ ಪೊಲೀಸ್ ಆಯುಕ್ತ ಮಧುಪ್ ತಿವಾರಿ ಹೇಳಿದ್ದಾರೆ.</p><p>ಹೆಲ್ಪ್ ಡೆಸ್ಕ್, ಪ್ರಥಮ ಚಿಕಿತ್ಸೆ ಕಿಯಾಸ್ಕ್, ಅತಿಥಿಗಳಿಗಾಗಿ ವಿಶ್ರಾಂತಿ ಕೇಂದ್ರ, ಕಾಣೆಯಾದವರ ಬಗ್ಗೆ ಮಾಹಿತಿ ನೀಡಲು ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.</p><p>ಸಮಯಕ್ಕೆ ಸರಿಯಾಗಿ ಪರೇಡ್ ಸ್ಥಳಕ್ಕೆ ಆಗಮಿಸಿ, ಭದ್ರತಾ ಸಿಬ್ಬಂದಿ ಜೊತೆ ಸಹಕರಿಸುವಂತೆ ತಿವಾರಿ ಮನವಿ ಮಾಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>