<p class="title"><strong>ಗಾಜಿಯಾಬಾದ್:</strong> ಮಳೆಯಿಂದ ರಕ್ಷಿಸಿಕೊಳ್ಳಲು ಆಶ್ರಯ ಪಡೆದಿದ್ದ ಸ್ಮಶಾನದ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮುರಾದ್ನಗರದಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಜೋರಾಗಿ ಬೀಳುತ್ತಿದ್ದ ಮಳೆಯಿಂದ ರಕ್ಷಣೆ ಪಡೆಯಲು ಸ್ಮಶಾನದ ಸಂಕೀರ್ಣವೊಂದರ ಚಾವಣಿಯಲ್ಲಿ 25 ಮಂದಿ ಆಶ್ರಯ ಪಡೆದಿದ್ದರು. ಮಳೆಗೆ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಹುತೇಕರು ರಾಮ್ ಧವನ್ ಎನ್ನುವವರ ಶವಸಂಸ್ಕಾರಕ್ಕೆ ಬಂದಿದ್ದ ಸಂಬಂಧಿಕರು. ಶವಸಂಸ್ಕಾರ ನಡೆಯುತ್ತಿದ್ದ ವೇಳೆಯೇ ಈ ದುರ್ಘಟನೆ ಸಂಭವಿಸಿದೆ.</p>.<p class="title">ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದ್ದು, ಮೃತದೇಹಗಳನ್ನು ಅವಶೇಷಗಳಿಂದ ಹೊರಕ್ಕೆ ತೆಗೆಯುವ ಕೆಲಸ ನಡೆಯುತ್ತಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಇರಾಜ್ ರಾಜಾ ತಿಳಿಸಿದ್ದಾರೆ.</p>.<p class="title">ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದು, ‘ಮೃತರ ಸಂಬಂಧಿಕರಿಗೆ ತಲಾ ₹ 2ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಗಾಜಿಯಾಬಾದ್:</strong> ಮಳೆಯಿಂದ ರಕ್ಷಿಸಿಕೊಳ್ಳಲು ಆಶ್ರಯ ಪಡೆದಿದ್ದ ಸ್ಮಶಾನದ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮುರಾದ್ನಗರದಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಜೋರಾಗಿ ಬೀಳುತ್ತಿದ್ದ ಮಳೆಯಿಂದ ರಕ್ಷಣೆ ಪಡೆಯಲು ಸ್ಮಶಾನದ ಸಂಕೀರ್ಣವೊಂದರ ಚಾವಣಿಯಲ್ಲಿ 25 ಮಂದಿ ಆಶ್ರಯ ಪಡೆದಿದ್ದರು. ಮಳೆಗೆ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಹುತೇಕರು ರಾಮ್ ಧವನ್ ಎನ್ನುವವರ ಶವಸಂಸ್ಕಾರಕ್ಕೆ ಬಂದಿದ್ದ ಸಂಬಂಧಿಕರು. ಶವಸಂಸ್ಕಾರ ನಡೆಯುತ್ತಿದ್ದ ವೇಳೆಯೇ ಈ ದುರ್ಘಟನೆ ಸಂಭವಿಸಿದೆ.</p>.<p class="title">ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದ್ದು, ಮೃತದೇಹಗಳನ್ನು ಅವಶೇಷಗಳಿಂದ ಹೊರಕ್ಕೆ ತೆಗೆಯುವ ಕೆಲಸ ನಡೆಯುತ್ತಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಇರಾಜ್ ರಾಜಾ ತಿಳಿಸಿದ್ದಾರೆ.</p>.<p class="title">ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದು, ‘ಮೃತರ ಸಂಬಂಧಿಕರಿಗೆ ತಲಾ ₹ 2ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>