ಭಕ್ತರ ಗುಂಪೊಂದು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿತ್ತು. ಈ ವೇಳೆ ಮರದ ತುಂಡೊಂದು ಪಟಾಕಿ ರಾಶಿಗೆ ಬಿದ್ದು, ಸ್ಥಳದಲ್ಲಿರುವವರ ಮೇಲೆ ಪಟಾಕಿಗಳು ಹಾರಿವೆ. ಈ ಪೈಕಿ ಕೆಲವರು ಸ್ವರಕ್ಷಣೆಗಾಗಿ ಪುಷ್ಕರಣಿಗೆ ಹಾರಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.