<p>ಹಾಥರಸ್ ,ಉತ್ತರ ಪ್ರದೇಶ: ರಾಷ್ಟ್ರೀಯ ಹೆದ್ದಾರಿ 93ರಲ್ಲಿ ನಡೆದ ಅಪಘಾತದಲ್ಲಿ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿದಂತೆ 15 ಮಂದಿ ಮೃತಪಟ್ಟಿದ್ದಾರೆ. </p>.<p>ಹಾಥರಸ್ನಿಂದ ಆಗ್ರಾದತ್ತ ಪ್ರಯಾಣಿಸುತ್ತಿದ್ದ ವ್ಯಾನ್ಗೆ ಹಿಂದಿನಿಂದ ರಸ್ತೆ ಸಾರಿಗೆ ಬಸ್ ಶುಕ್ರವಾರ ಡಿಕ್ಕಿ ಹೊಡೆಯಿತು. </p>.<p>ಆಗ್ರಾ–ಅಲೀಗಢ ರಾಷ್ಟ್ರೀಯ ಹೆದ್ದಾರಿಯ ಕುವರ್ಪುರ್ ಬಳಿ ವ್ಯಾನ್ ಅನ್ನು ಹಿಂದಿಕ್ಕುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. 15 ಮಂದಿ ಮೃತಪಟ್ಟಿದ್ದು, 33 ಜನ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸ್ಥಳೀಯ ಎಸ್.ಪಿ ನಿಪುಣ್ ಅಗರ್ವಾಲ್ ಮಾಹಿತಿ ನೀಡಿದರು. </p>.<p>ಸ್ಥಳಕ್ಕೆ ತೆರಳಿ ಅಗತ್ಯ ಪರಿಹಾರ ಕ್ರಮಗಳನ್ನು ನೋಡಿಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. </p>.<p>ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಾಳುಗಳ ಕುಟುಂದವರಿಗೆ ತಲಾ ₹50 ಸಾವಿರ ಚಿಕಿತ್ಸಾ ನೆರವನ್ನೂ ಪ್ರಕಟಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಥರಸ್ ,ಉತ್ತರ ಪ್ರದೇಶ: ರಾಷ್ಟ್ರೀಯ ಹೆದ್ದಾರಿ 93ರಲ್ಲಿ ನಡೆದ ಅಪಘಾತದಲ್ಲಿ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿದಂತೆ 15 ಮಂದಿ ಮೃತಪಟ್ಟಿದ್ದಾರೆ. </p>.<p>ಹಾಥರಸ್ನಿಂದ ಆಗ್ರಾದತ್ತ ಪ್ರಯಾಣಿಸುತ್ತಿದ್ದ ವ್ಯಾನ್ಗೆ ಹಿಂದಿನಿಂದ ರಸ್ತೆ ಸಾರಿಗೆ ಬಸ್ ಶುಕ್ರವಾರ ಡಿಕ್ಕಿ ಹೊಡೆಯಿತು. </p>.<p>ಆಗ್ರಾ–ಅಲೀಗಢ ರಾಷ್ಟ್ರೀಯ ಹೆದ್ದಾರಿಯ ಕುವರ್ಪುರ್ ಬಳಿ ವ್ಯಾನ್ ಅನ್ನು ಹಿಂದಿಕ್ಕುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. 15 ಮಂದಿ ಮೃತಪಟ್ಟಿದ್ದು, 33 ಜನ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸ್ಥಳೀಯ ಎಸ್.ಪಿ ನಿಪುಣ್ ಅಗರ್ವಾಲ್ ಮಾಹಿತಿ ನೀಡಿದರು. </p>.<p>ಸ್ಥಳಕ್ಕೆ ತೆರಳಿ ಅಗತ್ಯ ಪರಿಹಾರ ಕ್ರಮಗಳನ್ನು ನೋಡಿಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. </p>.<p>ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಾಳುಗಳ ಕುಟುಂದವರಿಗೆ ತಲಾ ₹50 ಸಾವಿರ ಚಿಕಿತ್ಸಾ ನೆರವನ್ನೂ ಪ್ರಕಟಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>